ಟಾಲಿವುಡ್ ನಟ ಅಲ್ಲು ಅರ್ಜುನ್ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿ ಅವರಿಗೆ ಸಾಂತ್ವನ ಹೇಳಿದರು
ಬೆಂಗಳೂರಿಗೆ ಬಂದ ನಂತರ ನಾಗವಾರದಲ್ಲಿರುವ ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರನ್ನು ಭೇಟಿ ಮಾಡಿ ಮಾತನಾಡಿದ ಅವರು, ಬಳಿಕ ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರಿಗೆ ಸಾಂತ್ವನ ಹೇಳಿದ್ದಾರೆ.
ನಂತರ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೊದಲಿಗೆ ಕನ್ನಡದಲ್ಲಿ ಎಲ್ಲರಿಗೂ ನಮಸ್ಕಾರ ತಿಳಿಸಿ, ಪುನೀತ್ ರಾಜ್ ಕುಮಾರ್ ಅವರ ಫ್ಯಾಮಿಲಿಯನ್ನು ಭೇಟಿ ಮಾಡಿದೆ. ಇಲ್ಲಿ ದೊಡ್ಡದಾಗಿ ಹೇಳಲು ಏನು ಇಲ್ಲ. ನಾನು ಬೆಂಗಳೂರಿಗೆ ಬಂದಾಗ ಅಪ್ಪು ಅವರನ್ನು ಭೇಟಿಯಾಗುತ್ತಿದೆ. ಅದೇ ರೀತಿ ಪುನೀತ್ ಹೈದರಾಬಾದ್ಗೆ ಭೇಟಿ ಕೊಟ್ಟಾಗ ನಮ್ಮನ್ನು ಭೇಟಿಯಾಗುತ್ತಿದ್ದರು ಎಂದು ತಿಳಿಸಿದರು
ಅಲ ವೈಕುಂಠಪುರಂ ಲೋ ಸಿನಿಮಾದ ಬುಟ್ಟ ಬೊಮ್ಮಾ ಸಾಂಗ್ ನೋಡಿ ಇಷ್ಟಪಟ್ಟು ಕರೆ ಮಾಡಿದ್ದರು.
ಕೋವಿಡ್ ಇದ್ದ ಕಾರಣ ಹಿಂದೆ ಮಾತನಾಡಲು ಬರುವುದಕ್ಕೆ ಆಗಿರಲಿಲ್ಲ. ಹಾಗಾಗಿ ಈಗ ಬಂದಿದ್ದೇನೆ.
ಪುನೀತ್ ಹಾಗೂ ನಾನು ಚೆನ್ನೈನ ಡ್ಯಾನ್ಸ್ ಕಾರ್ಯಕ್ರಮಕ್ಕೆ ಒಟ್ಟಿಗೆ ಹೋಗಿದ್ವಿ ಅದು ನನ್ನ ಜೀವನದ ಮರೆಯಲಾಗದ ಕ್ಷಣ ಎಂದು ನೆನಪಿಸಿಕೊಂಡರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ