ಟಾಲಿವುಡ್ ನಟ ಅಲ್ಲು ಅರ್ಜುನ್ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿ ಅವರಿಗೆ ಸಾಂತ್ವನ ಹೇಳಿದರು
ಬೆಂಗಳೂರಿಗೆ ಬಂದ ನಂತರ ನಾಗವಾರದಲ್ಲಿರುವ ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರನ್ನು ಭೇಟಿ ಮಾಡಿ ಮಾತನಾಡಿದ ಅವರು, ಬಳಿಕ ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರಿಗೆ ಸಾಂತ್ವನ ಹೇಳಿದ್ದಾರೆ.
ನಂತರ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೊದಲಿಗೆ ಕನ್ನಡದಲ್ಲಿ ಎಲ್ಲರಿಗೂ ನಮಸ್ಕಾರ ತಿಳಿಸಿ, ಪುನೀತ್ ರಾಜ್ ಕುಮಾರ್ ಅವರ ಫ್ಯಾಮಿಲಿಯನ್ನು ಭೇಟಿ ಮಾಡಿದೆ. ಇಲ್ಲಿ ದೊಡ್ಡದಾಗಿ ಹೇಳಲು ಏನು ಇಲ್ಲ. ನಾನು ಬೆಂಗಳೂರಿಗೆ ಬಂದಾಗ ಅಪ್ಪು ಅವರನ್ನು ಭೇಟಿಯಾಗುತ್ತಿದೆ. ಅದೇ ರೀತಿ ಪುನೀತ್ ಹೈದರಾಬಾದ್ಗೆ ಭೇಟಿ ಕೊಟ್ಟಾಗ ನಮ್ಮನ್ನು ಭೇಟಿಯಾಗುತ್ತಿದ್ದರು ಎಂದು ತಿಳಿಸಿದರು
ಅಲ ವೈಕುಂಠಪುರಂ ಲೋ ಸಿನಿಮಾದ ಬುಟ್ಟ ಬೊಮ್ಮಾ ಸಾಂಗ್ ನೋಡಿ ಇಷ್ಟಪಟ್ಟು ಕರೆ ಮಾಡಿದ್ದರು.
ಕೋವಿಡ್ ಇದ್ದ ಕಾರಣ ಹಿಂದೆ ಮಾತನಾಡಲು ಬರುವುದಕ್ಕೆ ಆಗಿರಲಿಲ್ಲ. ಹಾಗಾಗಿ ಈಗ ಬಂದಿದ್ದೇನೆ.
ಪುನೀತ್ ಹಾಗೂ ನಾನು ಚೆನ್ನೈನ ಡ್ಯಾನ್ಸ್ ಕಾರ್ಯಕ್ರಮಕ್ಕೆ ಒಟ್ಟಿಗೆ ಹೋಗಿದ್ವಿ ಅದು ನನ್ನ ಜೀವನದ ಮರೆಯಲಾಗದ ಕ್ಷಣ ಎಂದು ನೆನಪಿಸಿಕೊಂಡರು.
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
This website uses cookies.
Leave a Comment