crime

ಹನಿಟ್ರ್ಯಾಪ್ ಬಲೆಗೆ ಬಿದ್ದ ಚಿನ್ನದ ವ್ಯಾಪಾರಿ ಜಗನ್ನಾಥ್ ಶೆಟ್ಟಿ – 50 ಲಕ್ಷ ರು ಕಿತ್ತ ಸುಂದರಿ & ಗ್ಯಾಂಗ್

ಮಂಡ್ಯದ ಚಿನ್ನದ ವ್ಯಾಪಾರಿ ಜಗನ್ನಾಥ್ ಶೆಟ್ರನ್ನು ಹನಿಟ್ರ್ಯಾಪ್ ಸುಳಿಗೆ ಸಿಲುಕಿ 50 ಲಕ್ಷ ರು ಹಣ ಕಿತ್ತುಕೊಂಡ ಮಹಿಳೆಯೊಬ್ಬಳನ್ನು ಮಂಡ್ಯದ ಪಶ್ಚಿಮ ಪೋಲಿಸರು ಬಂಧಿಸಿದ್ದಾರೆ

ಹನಿಟ್ರ್ಯಾಪ್ ಯುವತಿ ಸೇರಿದಂತೆ ಏಳು ಮಂದಿ ಗ್ಯಾಂಗ್ ಈ ಕೃತ್ಯದಲ್ಲಿ ಭಾಗಿಯಾಗಿದೆ. ಐವರು ನಾಪತ್ತೆಯಾಗಿದ್ದಾರೆ.

ಮಂಡ್ಯದ ಕೆರೆ ಅಂಗಳದ ನಿವಾಸಿ ಸಲ್ಮಾ ಭಾನು ಎಂಬಾಕೆಯೇ ಈ ಹನಿಟ್ರ್ಯಾಪ್ ಪ್ರಕರಣದ ರುವಾರಿ. ಮಾಂಸ ತಿಂದು ದೇವಸ್ಥಾನಕ್ಕೆ ಬಂದ ಸಿದ್ದರಾಮಯ್ಯ – ಬಿಜೆಪಿ ಅಪಪ್ರಚಾರ : ಸಿದ್ದು

ಕಳೆದ ಕೆಲವು ದಿನಗಳಿಂದ ಯುವತಿಯೊಬ್ಬಳ ಮೂಲಕ ರಿಯಲ್ ಎಸ್ಟೇಟ್ ಉದ್ದಮಿಯೂ ಆಗಿರುವ ಜಗನ್ನಾಥ್ ಶೆಟ್ರುಗೆ ಮೊಬೈಲ್ ಕರೆ ಮಾಡಿಸಿ ಸ್ನೇಹ ಸಂಪಾದಿಸುವಂತೆ ಮಾಡಿದ್ದಾರೆ.

ನಂತರ ಮೈಸೂರಿನ ಲಾಡ್ಜ್ ಗೆ ಆ ಯುವತಿ ಹೇಳಿದ್ದಾಳೆ. ಅಲ್ಲಿಗೆ ಹೋದ ಶೆಟ್ರು ಯುವತಿ ಸಲುಗೆಯಿಂದ ಇರುವ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಬಂದ ನಂತರ ಯುವತಿ, ಸಲ್ಮಾ ಬಾನು ಸೇರಿ 7 ಮಂದಿ ಗ್ಯಾಂಗ್ ಶೆಟ್ರ ಬಳಿ 50 ಲಕ್ಷ ರುಗಳನ್ನು ಬ್ಲ್ಯಾಕ್ ಮೇಲ್ ಮಾಡಿ ಕಿತ್ತುಕೊಂಡು ಇನ್ನೂ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಈ ಗ್ಯಾಂಗ್ ಬೇಡಿಕೆ ಹೆಚ್ಚಾದಂತೆ ಜಗನ್ನಾಥ್ ಶೆಟ್ಟರು ಕೊನೆಗೆ ರೋಸಿ ಹೋಗಿ ಪೋಲಿಸರಿಗೆ ದೂರು ನೀಡಿದರು.

ನಂತರ ಹನಿಟ್ರ್ಯಾಪ್ ಪ್ರಕರಣದ ರುವಾರಿ ಸಲ್ಮಾಬಾನು ಬಂಧಿಸಿ ನಂತರ ತಲೆ ಮರೆಸಿಕೊಂಡಿರುವ ಯುವತಿ ಹಾಗೂ ಇತರ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

ಬಂಧನಕ್ಕೆ ಒಳಗಾದ ಸಲ್ಮಾ ಬಾನುಳನ್ನು 10 ದಿನಗಳ ಕಾಲ ವಿಚಾರಣೆಗೆ ಪೋಲಿಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಮಂಡ್ಯದ ಪಶ್ಚಿಮ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ.

Police FIR copy
Team Newsnap
Leave a Comment

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024