ಕಿರುತೆರೆಯಲ್ಲಿ ಅಸಂಖ್ಯಾತ ವೀಕ್ಷಕರ ಮನಗೆದ್ದು ಹಿರಿತೆರೆ (ಬಿಗ್ಸ್ಕ್ರೀ ನ್)ಯಲ್ಲಿ ರಾರಾಜಿಸಿ “ಗೋಲ್ಡನ್ಸ್ಟಾರ್” ಎಂಬ ಬಿರುದನ್ನು ಅಭಿಮಾನಿಗಳಿಂದ ಪಡೆದ ಗಣೇಶ್ ಕೆಲ ವರ್ಷಗಳ ನಂತರ ಈಗ ಮತ್ತೆ ಕಿರುತೆರೆಯಲ್ಲಿ ಕಾರ್ಯಕ್ರಮ(ರಿಯಾಲಿಟಿ ಶೋ)ವೊಂದನ್ನು ನಡೆಸಿಕೊಡಲು
ಬರ್ತಿದ್ದಾರೆ.
ಆಗ ಉದಯ ಟಿವಿಯಲ್ಲಿ “ಕಾಮಿಡಿ ಟೈಮ್ಸ್’ ಶೋ ನಡೆಸಿ ಯಶಸ್ವಿಯಾದ ಗಣೇಶ್ ಈಗ ಜೀ ಕನ್ನಡ ವಾಹಿನಿಯ ರಿಯಾಲಿಟಿ ಶೋ ನಡೆಸಿಕೊಡಲು ಶೀಘ್ರದಲ್ಲೇ ಬರ್ತಿದ್ದೀನಿ ಎಂದು ಪ್ರೋಮೊವನ್ನು ತಮ್ಮ ಟ್ವಿಟರ್ ಖಾತೆ ಮೂಲಕ ಬಹಿರಂಗಪಡಿಸಿದ್ದಾರೆ. ಆದರೆ ಶೋ ಏನು ಎಂಬುದನ್ನು ಮಾತ್ರ ಹೇಳಿಲ್ಲ.
ಸಾಕಷ್ಟು ಹಿಟ್ ಚಿತ್ರಗಳನ್ನು ಗಣೇಶ್ ನೀಡಿದ್ದಾರೆ. ಆದರೆ ಇತ್ತೀಚಿನ ಕೆಲ ಚಿತ್ರಗಳು (ಕೊರೊನೊ ಬರುವುದಕ್ಕೂ ಮೊದಲು) ನಿರೀಕ್ಷಿತ ಯಶಸ್ಸು ಪಡೆದಿರಲಿಲ್ಲ ಎಂಬ ಬೇಸರ ಅವರ ಅಭಿಮಾನಿಗಳಲ್ಲಿದೆ. ಈಗಲೂ ಹೊಸ ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ.
“ಬಹಳ ದಿನಗಳ ನಂತರ ಕಿರುತೆರೆಗೆ, ಜೀ ಕನ್ನಡದ ಮೂಲಕ ಒಂದು ಹೊಸ ರಿಯಾಲಿಟಿ ಶೋ ಜೊತೆ ಬರ್ತಿದ್ದೀನಿ. ಶೀಘ್ರದಲ್ಲಿ….ನಿರೀಕ್ಷಿಸಿ’ ಎಂದು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ “ಗಣಪನ ಆಗಮನ’ ಎಂದು ಜೀ ವಾಹಿನಿ ಗಮನಾರ್ಹ ಪ್ರೋಮೊ ಬಿಡುಗಡೆ ಮಾಡಿದೆ.
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
This website uses cookies.
Leave a Comment