Main News

ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಜೆಡಿಎಸ್‍ಗೆ ಗುಡ್ ಬೈ – ಬಿಜೆಪಿಗೆ ಸೇರುವುದು ಖಚಿತ

ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್‌ ಬಲ ಕುಸಿಯುತ್ತಿದೆ. ಮಾಜಿ ಸಚಿವ ಜಿ.ಟಿ.ದೇವೇಗೌಡರು ಜೆಡಿಎಸ್‍ ಬಿಡುವ ನಿರ್ಧಾರ ಮಾಡಿದ ಬೆನ್ನಲ್ಲೇ ಜೆಡಿಎಸ್‍ಗೆ ಮತ್ತೊಂದು ಆಘಾತವಾಗಿದೆ.

ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಜೆಡಿಎಸ್‍ಗೆ ಗುಡ್ ಬೈ ಹೇಳಿ, ಬಿಜೆಪಿಗೆ ಸೇರುವ ನಿರ್ಧಾರ ವನ್ನು ಪ್ರಕಟಿಸಿದರು. ಕಳೆದ ಒಂದೂವರೆ ವರ್ಷದಿಂದ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೊತೆ ಮುನಿಸಿಕೊಂಡಿರುವ ಸಂದೇಶ್ ನಾಗರಾಜ್, ಜೆಡಿಎಸ್ ಯಾವುದೇ ಕಾರ್ಯ ಕ್ರಮಕ್ಕೆ ಹೋಗದೇ ಅಂತರ ಕಾಯ್ದುಕೊಂಡು ಬಂದಿದ್ದಾರೆ.

ಸದ್ಯ ಮೈಸೂರು- ಚಾಮರಾಜನಗರ ಸ್ಥಳೀಯ ಸಂಸ್ಥೆ ಕ್ಷೇತ್ರದಿಂದ ಜೆಡಿಎಸ್ ನಿಂದ ಗೆದ್ದು ಪರಿಷತ್ ಸದಸ್ಯರಾಗಿದ್ದಾರೆ. ಪರಿಷತ್ ಸದಸ್ಯತ್ವದ ಅವಧಿ ಇದೇ ಡಿಸೆಂಬರ್ ಗೆ ಅಂತ್ಯವಾಗಲಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಸಂದೇಶ್ ನಾಗರಾಜ್ ಒಲವು ತೋರಿದ್ದಾರೆ.

ಈ ಎಲ್ಲಾ ಅಂಶಗಳಿಗೆ ಪುಷ್ಠಿ ನೀಡುವಂತೆ ಇಂದು ಬಿಜೆಪಿ ಕಚೇರಿಗೆ ಆಗಮಿಸಿದ ಜೆಡಿಎಸ್ ಪರಿಷತ್ ಸದಸ್ಯ ಸಂದೇಶ್ ನಾಗರಾಜ್, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾರನ್ನು ಸಹ ಭೇಟಿ ಮಾಡಿದ್ದಾರೆ.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಸಂದೇಶ್ ನಾಗರಾಜ್, ನಾನು ಬಿಜೆಪಿಗೆ ಬರುತ್ತೇನೆ, ಮತ್ತೆ ಮೂರನೇ ಬಾರಿ ಮೈಸೂರು- ಚಾಮರಾಜನಗರ ಸ್ಥಳೀಯ ಸಂಸ್ಥೆಯಿಂದ ಗೆದ್ದು ಬರುತ್ತೇನೆ. ಜನವರಿ 5ರ ತನಕ ಜೆಡಿಎಸ್ ಸದಸ್ಯನಾಗಿ ಇರುತ್ತೇನೆ. ಕಳೆದ ಒಂದೂವರೆ ವರ್ಷದಿಂದ ಜೆಡಿಎಸ್ ನಿಂದ ದೂರ ಉಳಿದಿದ್ದೇನೆ. ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯಾಧ್ಯಕ್ಷರ ಭೇಟಿ ಮಾಡಬೇಕಿತ್ತು. ಇಬ್ಬರೂ ಸಿಗಲಿಲ್ಲ ಮುಂದಿನ ದಿನಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರ ಜೊತೆ ಚರ್ಚೆ ಮಾಡಿ ಪಕ್ಷ ಸೇರುತ್ತೇನೆ ಎಂದರು.

ಮುಂದಿನ ದಿನಗಳಲ್ಲಿ ಬಿಜೆಪಿಗೆ ಬರೋದು ಖಚಿತ. ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನಸ್ಸು ಮಾಡಬೇಕು ಎಂದರು.

Team Newsnap
Leave a Comment
Share
Published by
Team Newsnap

Recent Posts

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More

April 29, 2024