Categories: Main News

ಆರ್ ಸಿ ಬಿ ರೋಚಕ ಗೆಲುವಿನ‌ ಮೂಲಕ ಐಪಿಎಲ್ ಗೆ ಶುಭಾರಂಭ

14ನೇ ಆವೃತ್ತಿಯ ಐಪಿಎಲ್ ಹಬ್ ನ‌ ಮೊದಲ ಪಂದ್ಯದಲ್ಲಿ ಬಲಿಷ್ಠ, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಚೆನ್ನೈ ನಲ್ಲಿ ನಡೆದ ಮೊದಲ ಪಂದ್ಯದ ರೋಚಕ ಹೋರಾಟದಲ್ಲಿ ಮಣಿಸಿದ ಆರ್‌ಸಿಬಿ, ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಮುಂಬೈ ಇಂಡಿಯನ್ಸ್ ತಂಡವನ್ನು 159 ರನ್‌ಗಳಿಗೆ ಕಟ್ಟಿಹಾಕಿದ ಆರ್‌ಸಿಬಿ ಸ್ಫೋಟಕ ಆರಂಭ ಪಡೆಯಲಿಲ್ಲ. ದೇವದತ್ ಪಡಿಕ್ಕಲ್ ಅನುಪಸ್ಥಿತಿಯಲ್ಲಿ ವಾಶಿಂಗ್ಟನ್ ಸುಂದರ್ ಆರಂಭಿಕನಾಗಿ ಕಣಕ್ಕಿಳಿದರು. ಆದರೆ ಸುಂದರ್ 10 ರನ್ ಸಿಡಿಸಿ ನಿರ್ಗಮಿಸಿದರು.
ನಾಯಕ ವಿರಾಟ್ ಕೊಹ್ಲಿಹೋರಾಟ ಮುಂದವರಿಸಿದರು. ಆದರೆ ರಜತ್ ಪಾಟಿದಾರ್ 8 ರನ್ ಸಿಡಿಸಿ ಔಟಾದರು.

ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ವಿರಾಟ್ ಕೊಹ್ಲಿ ಹೋರಾಟ ಆರ್‌ಸಿಬಿ ತಂಡವನ್ನು ಗೆಲುವಿನ ಹಾದಿಯನ್ನು ಸುಗಮ ಮಾಡಿದರು.

ಕೊಹ್ಲಿ 33 ರನ್ ಸಿಡಿಸಿ ಔಟಾದರು. ಇದರ ಬೆನ್ನಲ್ಲೇ ಗ್ಲೆನ್ ಮ್ಯಾಕ್ಸ್‌ವೆಲ್ 39 ರನ್ ಸಿಡಿಸಿ ನಿರ್ಗಮಿಸಿದರು. ಇಷ್ಟಾದರೂ ಆರ್‌ಸಿಬಿ ತಂಡದ ಅಭಿಮಾನಿಗಳಲ್ಲಿ ಯಾವುದೇ ಆತಂಕ ಎದುರಾಗಲಿಲ್ಲ. ಕಾರಣ ಎಬಿ ಡಿವಿಲಿಯರ್ಸ್ ಗೆಲುವಿನ‌‌ ಜೀವಂತಿಕೆ ಕಾಪಾಡುತ್ತಾರೆಂಬ ನಂಎ ಇತ್ತು.‌

ಡಿವಿಲಿಯರ್ಸ್ ಅಬ್ಬರಿಸಲು ಆರಂಭಿಸಿದರೆ, ಇತ್ತ ಶಹಬ್ಬಾಸ್ ಅಹಮ್ಮದ್ ವಿಕೆಟ್ ಕೈಚೆಲ್ಲಿದರು. ಡೆನಿಲ್ ಕ್ರಿಸ್ಟಿಯನ್ ಕೂಡ ಸಾಥ್ ನೀಡಲಿಲ್ಲ. ಡಿವಿಲಿಯರ್ಸ್‌ಗೆ ಏಕಾಂಗಿ ಹೋರಾಟ ನೀಡಬೇಕಾದ ಅನಿವಾರ್ಯತೆ ಎದುರಾಯಿತು.

ಡಿವಿಲಿಯರ್ಸ್ ಅಬ್ಬರದಿಂದ ಆರ್‍‌ಸಿಬಿ ತಂಡಕ್ಕೆ 12 ಎಸೆತದಲ್ಲಿ 19 ರನ್ ಅವಶ್ಯಕತೆ ಇತ್ತು.

ಅಂತಿಮ 8 ಎಸೆತದಲ್ಲಿ 8 ರನ್‌ಗಳು ಬೇಕಿತ್ತು. ಆದರೆ ಕೈಲ್ ಜ್ಯಾಮಿಸನ್ ರನೌಟ್ ಆರ್‌ಸಿಬಿ ತಂಡದ ಆತಂಕ ಮತ್ತಷ್ಟು ಹೆಚ್ಚಿಸಿತು. 3 ಎಸೆತದಲ್ಲಿ 3 ರನ್ ಬೇಕಿರುವಾಗ ಅನಗತ್ಯ ರನ್ ಗೆ ಗಳಿಸಲು ಹೋಗಿ ಡಿವಿಲಿಯರ್ಸ್ ರನೌಟ್‌ಗೆ ಬಲಿಯಾದರು.

ಡಿವಿಲಿಯರ್ಸ್ 27 ಎಸೆತದಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 48 ರನ್ ಸಿಡಿಸಿ ಔಟಾದರು. ಅಷ್ಟರಲ್ಲೇ ಆರ್‌ಸಿಬಿ ಸೋಲಿನ ಸುಳಿಗೆ ಸಿಲುಕಿತು. ಮೊಹಮ್ಮದ್ ಸಿರಾಜ್ 1 ರನ್ ಹಾಗೂ ಹರ್ಷಲ್ ಪಟೇಲ್ ಗೆಲುವಿನ ರನ್ ಸಿಡಿಸೋ ಮೂಲಕ ಆರ್‌ಸಿಬಿ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು.

Team Newsnap
Leave a Comment
Share
Published by
Team Newsnap

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024