ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ಪೊಲೀಸರಿಗೆ ಉತ್ತಮ ತರಬೇತಿ ದೊರೆಯುತ್ತಿದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಾನೇನು ಕಾಲಹರಣ ಮಾಡುತ್ತಿಲ್ಲ. ಪೊಲೀಸ್ ಅಕಾಡೆಮಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದೆ. ಸಮಾಜಕ್ಕೆ ಯೋಗ್ಯ ಪೊಲೀಸ್ ಅಧಿಕಾರಿ ಕೊಡಲು ಏನೆಲ್ಲಾ ಮಾಡಲಾಗುತ್ತದೆ ಎಂಬುದನ್ನು ಅರಿತುಕೊಂಡೆ ಎಂದು ಅವರು ವಿವರಿಸಿದರು.
ತಮ್ಮ ವಿದ್ಯಾರ್ಥಿ ಜೀವನದಲ್ಲಿ ಎನ್ಸಿಸಿಯಲ್ಲಿ ಭಾಗವಹಿಸಿದ್ದು, ಶೂಟಿಂಗ್ನಲ್ಲಿ ಬಹುಮಾನ ಪಡೆದಿದ್ದನ್ನು ಈ ಸಂದರ್ಭದಲ್ಲಿ ನೆನೆಪಿಸಿಕೊಂಡರು. ಸೈನಿಕರ ಕ್ಯಾಂಪ್ನಲ್ಲಿ ಪಾಲ್ಗೊಂಡಿದ್ದೆ. ಒಂದು ಗುಂಡು ಮಿಸ್ ಆಗದೆ ಶೂಟ್ ಮಾಡುವುದು ಮುಖ್ಯವಾಗುತ್ತದೆ ಎಂದರು.
ಸ್ಥಳಕ್ಕೆ ಭೇಟಿ: ಗೃಹಸಚಿವರು ಇಂದು ಮಧ್ಯಾಹ್ನ ಸುಮಾರು 2 ರ ವೇಳೆ ಅತ್ಯಾಚಾರ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದಕ್ಕೂ ಮುನ್ನ ಬೆಳಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಸಚಿವರು ನಂತರ ಪೊಲೀಸ್ ಅಕಾಡೆಮಿಗೆ ಭೇಟಿ ನೀಡಿದ್ದರು.
ಐಜಿ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಅರಗ ಜ್ಞಾನೇಂದ್ರ ಮಧ್ಯಾಹ್ನದ ವೇಳೆಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿನ ಲಲಿತಾದ್ರಿಪುರದ ಬಳಿ ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳೊಂದಿಗೆ ಭೇಟ ನೀಡಿ ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment