Categories: Main News

ಗೂಗಲ್ ಸಚ್೯ ಮಾಡಿ ಆತ್ಮಹತ್ಯೆ: ಕನಸುಗಾರ ಯುವಕನ‌ ದುರಂತ ಅಂತ್ಯ

ಆತ್ಮಹತ್ಯೆ ದಾರಿ ಕಂಡುಕೊಳ್ಳಲು ಗೂಗಲ್ ಸರ್ಚ್ ಮಾಡಿದ ಯುವಕ ನೊಬ್ಬ ನೈಟ್ರೋಜನ್ ಸಿಲಿಂಡರ್ ಪೈಪ್ ಅನ್ನು ಮೂಗಿಗೆ ತೂರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಘಟನೆ ಬೆಂಗಳೂರಿನ ಮಹದೇಹಪುರದಲ್ಲಿ ನಡೆದಿದೆ. ಬೀದರ್ ಮೂಲದ ಜೀವನ್ ಅಂಬಾಟೆ ಆತ್ಮಹತ್ಯೆಗೆ ಶರಣಾದ ಯುವಕ. 

ಜೀವನ್ ಅಂಬಾಟೆ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಟೀಂ ಲೀಡರ್ ಆಗಿ ಕೆಲಸ ಮಾಡುತ್ತಿದ್ದ. ಗರುಡಾಚಾರಪಾಳ್ಯದ ಲಕ್ಷ್ಮೀಸಾಗರ ಬಡಾವಣೆಯಲ್ಲಿ ವಾಸವಾಗಿದ್ದ ಈತ ಜೀವನದ ಬಗ್ಗೆ ಬಹಳ ಮಹತ್ವಾಕಾಂಕ್ಷೆ ಹೊಂದಿದ್ದನು.

ನಗರದಲ್ಲಿ ಕೆಲಸಕ್ಕೆ ಸೇರಿದ ಬಳಿಕ ಆತನ ಜೀವನ ಶೈಲಿಯೇ ಬದಲಾಗಿತ್ತು. ಇದರಿಂದಾಗಿ ಕೆಲ ದಿನಗಳಿಂದ ಜಿಗುಪ್ಸೆಗೂ ಒಳಗಾಗ ಜೀವನ್ ಬದುಕಿನ ಪಯಣ ಮುಗಿಸೋ ಸಲುವಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದ. ಅದಕ್ಕಾಗಿ ಗೂಗಲ್ ನಲ್ಲಿ ಕೆಲವು ಮಾರ್ಗಗಳನ್ನು ಹುಡುಕಿದ್ದ ಎಂದು ಮಹದೇವಪುರ ಪೊಲೀಸ್ ಮೂಲಗಳು ತಿಳಿಸಿವೆ.

ಆನ್ ಲೈನ್ ನಲ್ಲಿ ಸಿಕ್ಕ ಮಾಹಿತಿಯಂತೆ ಜೀವನ್ ಬಲೂನ್ ಗಳಿಗೆ ತುಂಬಿಸುವ ನೈಟ್ರೋಜನ್ ಸಿಲಿಂಡರ್ ತಂದಿದ್ದಾನೆ. ಬಳಿಕ ಸಿಲಿಂಡರ್ ಪೈಪ್ ಮೂಗಿಗೆ ಇಟ್ಕೊಂಡು ಕನೆಕ್ಟ್ ಮಾಡಿದ್ದ ಯುವಕ ಮುಖವನ್ನು ಕವರ್ ಪ್ಯಾಕ್ ಮಾಡ್ಕೊಂಡು ಗ್ಯಾಸ್ ಸಿಲಿಂಡರ್ ಆನ್ ಮಾಡಿಕೊಂಡು ಉಸಿರು ಕಟ್ಟಿ ಸಾವನ್ನಪ್ಪಿದ್ದಾನೆ.

4 ಪುಟಗಳ ಡೆತ್ ನೋಟ್ ಪತ್ತೆಯಾಗಿದೆ. ಈತ ಮದುವೆ ಆಗಿಲ್ಲ. ಸಾವಿಗೆ ಯಾರೂ ಕಾರಣರಲ್ಲ ಎಂದಿದ್ದಾನೆ. ಮಹದೇವಪುರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಶಾಲೆಗಳಿಗೆ 17 ದಿನಗಳ ದಸರಾ ರಜೆ ಘೋಷಣೆ

ಬೆಂಗಳೂರು : ಅಕ್ಟೋಬರ್ 3 ರಿಂದ 20 ತನಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ್ದು ,ರಾಜ್ಯದ… Read More

September 23, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 23 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 69,600 ರೂಪಾಯಿ ದಾಖಲಾಗಿದೆ. 24… Read More

September 23, 2024

ಬೆಂಗಳೂರಿನಲ್ಲಿ ಮಹಿಳೆಯನ್ನು 50 ತುಂಡಾಗಿ ಕತ್ತರಿಸಿ ಹತ್ಯೆ ಪ್ರಕರಣ: ಇಬ್ಬರು ವಶಕ್ಕೆ

ಬೆಂಗಳೂರು: ವೈಯಾಲಿಕಾವಲ್ ನ ಬಸಪ್ಪ ಗಾರ್ಡನ್ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದ ಮಹಾಲಕ್ಷ್ಮಿ(29) ಹತ್ಯೆ ಪ್ರಕರಣದಲ್ಲಿ ಇಬ್ಬರು ಶಂಕಿತರನ್ನು… Read More

September 23, 2024

ಇಂದಿನಿಂದ ರಾಜ್ಯದಾದ್ಯಂತ 20 ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು: ರಾಜ್ಯದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ,ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ… Read More

September 23, 2024

ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ

ಬೆಂಗಳೂರು: ದುಷ್ಕರ್ಮಿಗಳು ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ… Read More

September 23, 2024

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024