ಬೆಳಿಗ್ಗೆ 10ಕ್ಕೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ, ಸರ್ಕಾರಿ ನೌಕರರಿಗೆ ಖಡಕ್ ಎಚ್ಚರಿಕೆ ನೀಡಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸುತ್ತೋಲೆ ಹೊರಡಿಸಿದ್ದು, ಈಗಾಗಲೇ ಸರ್ಕಾರಿ ನೌಕರರಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದರು ಕೆಲವು ನೌಕರರು, ಅಧಿಕಾರಿಗಳಲ್ಲಿ ಸಮಯ ಪ್ರಜ್ಞೆ ಮತ್ತು ಕಾರ್ಯನಿಷ್ಠೆಯ ಕೊರತೆಯನ್ನು ಇತ್ತೀಚಿನ ದಿನಗಳಲ್ಲಿ ಅವಲೋಕಿಸಲಾಗಿದೆ ಎಂದಿದ್ದಾರೆ.

ಸಾರ್ವಜನಿಕರು ದೂರದ ಸ್ಥಳಗಳಿಂದ ಸರ್ಕಾರಿ ಕಚೇರಿಯಲ್ಲಿನ ತಮ್ಮ ಕಾರ್ಯಗಳಿಗೆ ಬೆಳಿಗ್ಗೆ ನಿಗದಿತ ಅವಧಿಗೆ ಸರ್ಕಾರದ ಕಚೇರಿಗಳಿಗೆ ಭೇಟಿ ನೀಡಿದಾಗ ಬಹುತೇಕ ಕಚೇರಿಗಳಲ್ಲಿ ಸಿಬ್ಬಂದಿಗಳು, ಅಧಿಕಾರಿಗಳು ಕಚೇರಿಗೆ ಹಾಜರಾಗಿಲ್ಲದೇ ಇರುವ ಕಾರಣ ಸಾಮಾನ್ಯ ಜನರು ಬವಣೆ ಪಡುವಂತೆ ಆಗಿದೆ ಎಂದು ಹೇಳಿದ್ದಾರೆ.
ಜು.30ರಂದು ಸಿಇಟಿ ಫಲಿತಾಂಶ – ಸಚಿವ ಅಶ್ವತ್ಥನಾರಾಯಣ
ಈ ಹಿನ್ನಲೆಯಲ್ಲಿ ಸರ್ಕಾರದ ಕಚೇರಿ ಪ್ರಾರಂಭದ ಸಮಯ ಬೆಳಿಗ್ಗೆ 10 ಗಂಟೆಗೆ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವುದು. ಅನ್ಯ ಕರ್ತವ್ಯದ ಮೇರೆಗೆ ತೆರಳಬೇಕಾಗಿದ್ದಲ್ಲಿ, ಸಕಾರಣವನ್ನು ನಮೂದಿಸಿ, ಮೇಲಾಧಿಕಾರಿಗಳ ಪೂರ್ವಾನುಮತಿಯನ್ನು ಪಡೆಯತಕ್ಕದ್ದು ಎಂದು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು