ಸಾರ್ವಜನಿಕ ಗಣೇಶೋತ್ಸವ ಆಚರಣೆ ಸಂಬಂಧ ಕೆಲದಿನಗಳಿಂದ ಮೂಡಿದ್ದ ಹಲವು ಅನುಮಾನಗಳಿಗೆ ಇಂದು ತೆರೆಬಿದ್ದಿದೆ. ಐದು ದಿನಗಳ ಕಾಲ ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆಗೆ ರಾಜ್ಯ ಸರ್ಕಾರ ಸಮ್ಮತಿ ನೀಡಿದೆ. ಹಾಗೆಯೇ ಹಲವು ಷರತ್ತುಗಳನ್ನು ವಿಧಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಮಹತ್ವದ ಸಭೆಯ ನಂತರ ಕಂದಾಯ ಸಚಿವ ಆರ್. ಅಶೋಕ್ ಸುದ್ದಿಗಾರರಿಗೆ ಗಣೇಶೋತ್ಸವ ಆಚರಣೆ ಸಂಬಂಧ ಮಾಹಿತಿ ನೀಡಿದರು.
ಷರತ್ತುಗಳು ಹೀಗಿವೆ:
*ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಜಿಲ್ಲಾಡಳಿತದ ಅನುಮತಿ ಅಗತ್ಯ.
*ನಗರ ಪ್ರದೇಶಗಳಲ್ಲಿ ವಾರ್ಡ್ಗೆ ಒಂದು ಗಣೇಶ ವಿಗ್ರಹ ಸ್ಥಾಪನೆ.
*ತಾಲೂಕು, ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳೀಯ ಆಡಳಿತದ ಸೂಚನೆ ಮೇರೆಗೆ ಮೂರ್ತಿ ಸ್ಥಾಪನೆ.
*ಗಣೇಶೋತ್ಸವದ ಸಂಘಟಕರು ಕೋವಿಡ್ ಲಸಿಕೆ ಪಡೆದಿರಬೇಕು.
*ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲೇ ವ್ಯಾಕ್ಸಿನೇಷನ್ ಅಭಿಯಾನ.
*ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು.
50 .50 ವಿಸ್ತೀರ್ಣದ ಪೆಂಡಾಲ್ ನಿರ್ಮಾಣಕ್ಕೆ ಅವಕಾಶ.
*ಯಾವುದೇ ಮನರಂಜನಾ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಡಿಜೆಗಂತೂ ಇಲ್ಲವೇ ಇಲ್ಲ.
*ಗಣೇಶ ಮೂರ್ತಿ ವಿಸರ್ಜನೆ ಸಮಯದಲ್ಲಿ ಮೆರವಣಿಗೆಯಿಲ್ಲ. ವಾದ್ಯಗಳನ್ನು ಬಳಸುವಂತಿಲ್ಲ.
*ನಿಗದಿತ ಸದಸ್ಯರಿಂದ, ನಿಗದಿತ ಸ್ಥಳಗಳಲ್ಲಿ ಮೂರ್ತಿಯ ವಿಸರ್ಜನೆ.
*ಹಳ್ಳಿಗಳಲ್ಲಿ ಕೆರೆಗಳಲ್ಲಿ ವಿಸರ್ಜನೆಗೆ ಅವಕಾಶ.
*ಕೋವಿಡ್ ಪಾಸಿಟಿವಿಟಿ ದರ ಶೇ. 2ಕ್ಕಿಂತ ಕಡಿಮೆ ಇರುವ ಗಡಿ ಜಿಲ್ಲೆಗಳಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪಿಸಬಹುದು.
*ಶಾಲಾ-ಕಾಲೇಜುಗಳಲ್ಲಿ ಗಣಪತಿ ಕೂರಿಸಲು ಅವಕಾಶವಿಲ್ಲ.
ಒಂದು ತಾಸು ನಡೆದ ಸಭೆಯಲ್ಲಿ ತಜ್ಞರ ಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಆನ್ಲೈನ್ನಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್, ಅಧಿಕಾರಿಗಳು ಭಾಗವಹಿಸಿದ್ದರು.
ಕಳೆದ ಬಾರಿ ಕೊರೊನಾ ಉಚ್ಚಾçಯ ಸ್ಥಿತಿಯಲ್ಲಿದ್ದ ಕಾರಣ ಸಾರ್ವಜನಿಕ ಗಣೇಶ ಹಬ್ಬಕ್ಕೆ ಅವಕಾಶವಿರಲಿಲ್ಲ. ಈ ಬಾರಿ ಪರಿಸ್ಥಿತಿ ಸುಧಾರಿಸಿದೆ. ಹಾಗೆಯೇ ಅಕ್ಟೋಬರ್, ನವೆಂಬರ್ನಲ್ಲಿ ಮೂರನೇ ಅಲೆ ಬರಬಹುದು ಎಂದು ತಜ್ಞರು ಹೇಳಿರುವುದರಿಂದ ಸಾರ್ವಜನಿಕರ ಸಹಕಾರ ಅತಿ ಮುಖ್ಯವಾಗಿದೆ ಎಂದು ಅಶೋಕ್ ಹೇಳಿದರು.
ಅಪಾರ್ಟ್ಮೆಂಟ್ಗಳಲ್ಲೂ ಗಣೇಶ ಮೂರ್ತಿ ಕೂರಿಸಲು ಅವಕಾಶ ನೀಡಲಾಗಿದೆ. ಅದರೆ 20 ಕ್ಕಿಂತ ಹೆಚ್ಚು ಜನ ಸೇರಬಾರದು. ಕಾರ್ಯಕ್ರಮವನ್ನು ಆನ್ಲೈನ್ ಮೂಲಕ ವೀಕ್ಷಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಅಪಾರ್ಟ್ಮೆಂಟ್ನವರೂ ಹೇಳಿದ್ದಾರೆ. ಬೆಂಗಳೂರಿಗೆ ಸಂಬಂಧಿಸಿದಂತೆ ಸೋಮವಾರ ತಮ್ಮ ನೇತೃತ್ವದಲ್ಲಿ ಸಭೆಯೊಂದು ನಡೆಯಲಿದೆ ಎಂದು ಆಶೋಕ್ ತಿಳಿಸಿದರು.
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment