ಮಂಡ್ಯ ಜಿಲ್ಲೆಯ ಗಣಿಗಾರಿಕೆ ಅತಂತ್ರ ಸ್ಥಿತಿಯಲ್ಲಿದೆ. ಗಣಿಗಾರಿಕೆ ವಿಷಯದಲ್ಲಿ ರಾಜ್ಯಕ್ಕೊಂದು ಕಾನೂನು, ಮಂಡ್ಯಕ್ಕೆ ಒಂದು ಪ್ರತ್ಯೇಕ ಕಾನೂನು ಇದೆ. ಅದನ್ನು ಮೊದಲು ಸರಿಪಡಿಸಿ ಎಂದು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ವಿಧಾನ ಸಭೆಯ ಅಧಿವೇಶನದಲ್ಲಿ ಗುಡುಗಿದರು.
ಮಂಡ್ಯ ಜಿಲ್ಲೆಯ ರೈತರು ಇಂದು ತೀವ್ರ ಕಷ್ಟದಲ್ಲಿ ಇದ್ದಾರೆ. ಕಬ್ಬು ಬೆಳೆದರೂ ಅರೆಯಲು ಅವಕಾಶವಾಗುತ್ತಿಲ್ಲ. ಕಬ್ಬು ದರ ನಿಗದಿಯಾಗದೇ ಇರುವುದು ರೈತರ ಸಂಕಷ್ಟಕ್ಕೆ ಕಾರಣವಾಗಿದೆ ಎಂದು ಸರ್ಕಾರದ ವಿರುದ್ದ ಛಾಟಿ ಬೀಸಿದರು.
ಮಂಡ್ಯ ಜಿಲ್ಲೆಯಲ್ಲಿನ ನೀರಾವರಿಯ ಕಾಮಗಾರಿಗಳು ಗೊಂದಲ ಹಾಗೂ ನಿರ್ಲಕ್ಷ್ಯ ಕ್ಕೆ ಒಳಗಾಗಿವೆ. ಮಾಜಿ ಸಿಎಂ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ಮಂಜೂರು ಮಾಡಿದ್ದ ಎಲ್ಲಾ ಯೋಜನೆ ಗಳಿಗೆ ನಿರ್ಬಂಧ ಹೇರಿ, ಯೋಜನೆಗಳನ್ನು ಸಂಪೂರ್ಣವಾಗಿ ಸ್ಥಗಿತ ಮಾಡಲಾಗಿದೆ. ಯಡಿಯೂರಪ್ಪನವರು ಮಂಡ್ಯ ಜಿಲ್ಲೆಯವರಾಗಿ ಕಾಮಗಾರಿಗಳಿಗೆ ಹಂತ ಹಂತವಾಗಿ ಹಣ ಮಂಜೂರು ಮಾಡುವುದಾಗಿ ಹೇಳಿದ್ದರು. ಆದರೆ ಯಾವುದನ್ನೂ ಅನುಷ್ಠಾನಕ್ಕೆ ತರಲಿಲ್ಲ ಎಂದು ವಿಷಾದಿಸಿದರು.
ಗಣಿಗಾರಿಗೆಯಲ್ಲಿ ರಾಜಕೀಯ ಮಾಡಿ, ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆ ಮಾಡಿರುವುದು, ಹಾಗೂ ಕಂದಾಯ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಅನ್ಯಾಯ, ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಸಿಗದೇ ಸತಾಯಿಸುತ್ತಿರುವ ಸಂಗತಿಗಳನ್ನು ಸರ್ಕಾರದ ಗಮನಕ್ಕೆ ತಂದರು.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment