Categories: Main News

ಸರ್ಕಾರಿ ಕೆಲಸ ಜವಾಬ್ದಾರಿಯುತ ಕೆಲಸ- ಓತ್ಲಾ ಹೊಡೆಯುವ ಕೆಲಸ ಅಲ್ಲ

ಬಹಳಷ್ಟು ಸರ್ಕಾರಿ ಅಧಿಕಾರಿಗಳ ಒಂದು ಸಾಮಾನ್ಯ ಗುಣ ಎಂದರೆ, ( ಕೇಂದ್ರ ಮತ್ತು ರಾಜ್ಯ ಸೇರಿ )
ಐಎಸ್ ನಿಂದ ಡಾಕ್ಟರ್ ಇಂಜಿನಿಯರ್ ಸೇರಿದಂತೆ ಬಹುತೇಕ ಎಲ್ಲಾ ವಿಭಾಗದವರು ಕೆಲಸಕ್ಕೆ ಸೇರುವಾಗ ಅತ್ಯಂತ ಶ್ರದ್ಧೆಯಿಂದ ಮತ್ತು ಕಷ್ಟಪಟ್ಟು ಓದುತ್ತಾರೆ. ಕೆಲಸ ಸಿಕ್ಕ ನಂತರ ಅಲ್ಲಿಗೆ ಅವರ ಓದು ಪರಿಶ್ರಮ ಮತ್ತು ಬುದ್ದಿಯ ಬೆಳವಣಿಗೆ ಹೆಚ್ಚು ಕಡಿಮೆ ನಿಂತು ಹೋಗುತ್ತದೆ.

ಕೆಲಸ ಸೇರಿದ ನಂತರ ಒಮ್ಮೆ ತಮ್ಮ ಆಫೀಸಿನ ಕೆಲಸ ಪ್ರಾರಂಭ ಮಾಡುವ ಅವರು ಖಚಿತ ಸಂಬಳದ ಭದ್ರತೆಯೊಂದಿಗೆ ಪೈಲುಗಳಲ್ಲಿ ಮುಳುಗಿ ಹೋಗುತ್ತಾರೆ. ಯಾವುದೇ ಹೊಸತನಕ್ಕೂ ತಮ್ಮನ್ನು ತೆರೆದು ಕೊಳ್ಳುವುದಿಲ್ಲ ಮತ್ತು ನಮ್ಮ ಸರ್ಕಾರಿ ವ್ಯವಸ್ಥೆ ಅದಕ್ಕೆ ಪ್ರೋತ್ಸಾಹವೂ ಕೊಡುವುದಿಲ್ಲ.

ಸಾಕಷ್ಟು ಅಧಿಕಾರಿಗಳು ತಮ್ಮ ಯೌವನದ ದಿನಗಳಲ್ಲಿ ಸರ್ಕಾರಿ ಕೆಲಸ ಪ್ರಾರಂಭಿಸಿದರೆ ಮತ್ತೆ ಬದುಕಿನ ಬಗ್ಗೆ ಹಿಂತಿರುಗಿ ನೋಡುವುದು ನಿವೃತ್ತಿಯ ಸಮಯದಲ್ಲಿ.

ಸಾಮಾನ್ಯವಾಗಿ ನಮ್ಮ ವ್ಯವಸ್ಥೆಯಲ್ಲಿ ಸರ್ಕಾರದ ಕೆಲಸ ಪಡೆಯುವುದೇ ಜೀವನದ ಸಾರ್ಥಕತೆ ಎಂದು ಭಾವಿಸಲಾಗುತ್ತದೆ. ಕೆಲಸ ದೊರತ ನಂತರ ಅವರ ಮಾರುಕಟ್ಟೆ ಮೌಲ್ಯ ವೃದ್ಧಿಸುತ್ತದೆ. ಆಗ ಆದಷ್ಟು ಬೇಗ ಮದುವೆ ಮಾಡಲಾಗುತ್ತದೆ. ಅಲ್ಲಿಂದ ಅವರ ಯೋಚನೆ ಹೆಂಡತಿ/ಗಂಡ ಮಕ್ಕಳು ಅವರ ವಿಧ್ಯಾಭ್ಯಾಸ ಮದುವೆ ಸ್ವಂತ ಮನೆ ಇತ್ಯಾದಿಗಳ ಸುತ್ತಲೇ ತಮ್ಮೆಲ್ಲಾ ಯೋಚನೆ ಮತ್ತು ಕಾರ್ಯತಂತ್ರ ರೂಪಿಸುತ್ತಾರೆ.

ಹೇಗಿದ್ದರೂ ಸಂಬಳ ತಿಂಗಳಿಗೆ ಸರಿಯಾಗಿ ಬರುತ್ತದೆ. ದಿನ ಕಳೆದಂತೆ ಆಫೀಸಿನ ಕೆಲಸಗಳೂ ಸುಲಭವಾಗಿ ಕಾಟಾಚಾರಾದ ಟೈಂಪಾಸ್ ಗಾಗಿ ದಿನ ದೂಡುತ್ತಾರೆ ಮತ್ತು ಸಾರ್ವಜನಿಕ ಸೇವೆ ಎಂಬುದು ಮರೆತೇ ಹೋಗುತ್ತದೆ. ಇನ್ನು ಕ್ರಿಯಾತ್ಮಕ ಚಟುವಟಿಕೆಗಳ ಬಗ್ಗೆ ಯೋಚಿಸುವ ಗೋಜಿಗೇ ಹೋಗುವುದಿಲ್ಲ. ಹೊಸ ಹೊಸ ವಿಷಯಗಳನ್ನು ಕಲಿಯುವ ಆಸಕ್ತಿಯೂ ಇರುವುದಿಲ್ಲ. ಸಾಧನೆಯ ಕನಸೂ ಕಾಣುವುದಿಲ್ಲ.

30 ವರ್ಷಗಳಷ್ಟು ದೀರ್ಘಕಾಲ ಆರ್ಥಿಕ ಭದ್ರತೆ ಅವರನ್ನು ಸೋಮಾರಿಗಳಾಗಿ ಮಾಡುತ್ತದೆ.

ಎಲ್ಲೋ ಬೆರಳೆಣಿಕೆಯಷ್ಟು ಜನ ಮಾತ್ರ ಈ ಏಕತಾನತೆಯನ್ನು ಮೀರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಾರೆ. ಅದು ತೀರಾ ಅಪರೂಪ.

ಈಗ ಅರ್ಥವಾಗಿರುವ ವಿಷಯವೆಂದರೆ ಈ ಕಾರಣಕ್ಕಾಗಿಯೇ ನಮ್ಮ ಆಡಳಿತಾತ್ಮಕ ವ್ಯವಸ್ಥೆ ಜಡ್ಡುಗಟ್ಟಿ ಹೋಗಿ ಸಂವೇದನೆಯನ್ನೇ ಕಳೆದುಕೊಂಡಿದೆ.
5 ವರ್ಷದ ಅವಧಿಯ ರಾಜಕಾರಣಿಗಳ ಕ್ರಿಯಾತ್ಮಕ – ದುರಾತ್ಮಕ ಭ್ರಷ್ಟತೆಗೆ ಇದು ಅತ್ಯಂತ ಪೂರಕ ವಾತಾವರಣ ಕಲ್ಪಿಸಿದೆ.

ಹೆಸರಿಗೆ ಮಾತ್ರ ಕೃಷಿ ನೀರಾವರಿ ಗೃಹ ಆರೋಗ್ಯ ಗ್ರಾಮೀಣ ಅಭಿವೃದ್ಧಿ ಹಣಕಾಸು ಮಹಿಳೆಯರು ಮಕ್ಕಳು ಕಂದಾಯ ಹೀಗೆ ಎಲ್ಲಾ ಕ್ಷೇತ್ರಗಳಿಗೂ ಇಲಾಖೆಗಳು ಇವೆ. ಆದರೆ ಕೆಲಸ ಮಾತ್ರ ಯಥಾಸ್ಥಿತಿ ಕಾಪಾಡುವುದು ಅಥವಾ ಅದನ್ನು ಇನ್ನಷ್ಟು ಅಧೋಗತಿಗೆ ಒಯ್ಯುವುದು. ಅವರು ಆಧುನಿಕತೆಗೆ, ಹೊಸತನಕ್ಕೆ, ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳಲು ತುಂಬಾ ಉದಾಸೀನ ಮನೋಭಾವ ಹೊಂದಿರುತ್ತಾರೆ. Update ಆಗಲು ಪ್ರಯತ್ನಿಸುವುದೇ ಇಲ್ಲ. ಅದಕ್ಕಾಗಿ ಶ್ರಮ ಪಡುವುದು ಇಲ್ಲ. ಕಾರಣ ಆರ್ಥಿಕ ಭದ್ರತೆ.

ನಿಜಕ್ಕೂ ದೇಶದ ಸರ್ವತೋಮುಖ ಅಭಿವೃದ್ಧಿಗೆ ದೇಶದ ಆಡಳಿತಶಾಹಿ ವ್ಯವಸ್ಥೆ ಅತ್ಯಂತ ಪ್ರಾಮಾಣಿಕ ಮತ್ತು ಕ್ರಿಯಾತ್ಮಕವಾಗಿರಬೇಕು. ಇಲ್ಲದಿದ್ದರೆ ಯಾವ ಯೋಜನೆಗಳು ಎಷ್ಟೇ ಉತ್ತಮವಾಗಿದ್ದರೂ ಪ್ರಯೋಜನವಾಗುವುದಿಲ್ಲ.ಆದ್ದರಿಂದ ಈ ವಿಷಯದಲ್ಲಿಯೇ ಅತ್ಯಂತ ಜರೂರಾಗಿ ಆಡಳಿತ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಮತ್ತು ಕ್ರಿಯಾತ್ಮಕವಾಗಿ ಪುನರ್ ರೂಪಿಸಿ ಅಧಿಕಾರಿಗಳನ್ನು ಹೆಚ್ಚು ಉತ್ತರದಾಯಿತ್ವಕ್ಕೆ ಒಳಪಡಿಸಬೇಕಿದೆ.
ಸರ್ಕಾರಿ ಕೆಲಸ ಅತ್ಯಂತ ಜವಾಬ್ದಾರಿಯುತ ಕೆಲಸವೇ ಹೊರತು ಓತ್ಲಾ ಹೊಡೆಯುವ ಆರಾಮ ಕೆಲಸ ಅಲ್ಲ ಎಂದು ಪ್ರತಿ ಉದ್ಯೋಗಿಗೂ ಮನನ ಮಾಡಿಸಬೇಕಿದೆ.

ಆ ದಿನಗಳು ಬೇಗ ಬರಲಿ ಎಂದು ಆಶಿಸುತ್ತಾ……

  • ವಿವೇಕಾನಂದ. ಹೆಚ್.ಕೆ.
Team Newsnap
Leave a Comment
Share
Published by
Team Newsnap

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024