ಡಿಜಿಟಲ್ ಕ್ಷೇತ್ರವನ್ನು ವಿನೂತನವಾಗಿ ಬಳಸಿಕೊಂಡು ಸರ್ಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸವನ್ನು ಮಾಡಲು ಜಿಲ್ಲಾ ವಾರ್ತಾ ಕಚೇರಿಗಳು ಸಜ್ಜಾಗಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಡಾ.ಪಿ.ಎಸ್.ಹರ್ಷ ಕರ ನೀಡಿದರು.
ಶುಕ್ರವಾರ ಮೈಸೂರಿನಲ್ಲಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಹರ್ಷ ವಾರ್ತಾ ಇಲಾಖೆಯಿಂದ ನಿರಂತರವಾಗಿ ಕ್ಷಣ ಕ್ಷಣದ ಸುದ್ದಿಗಳು ಪ್ರಕಟವಾಗುವಂತೆ ಜಿಲ್ಲಾ ಕಚೇರಿಗಳು ಬಲವರ್ಧನೆ ಆಗಬೇಕು. ಅದಕ್ಕೆ ಅವಶ್ಯಕವಿರುವ ನೆರವನ್ನು ನೀಡಲಾಗುವುದು ಎಂದು ತಿಳಿಸಿದರು.
ಕಡಿಮೆ ಸಂಖ್ಯೆಯ ನೌಕರರನ್ನು ಹೊಂದಿರುವ ಇಲಾಖೆಯಲ್ಲಿ ನೌಕರರ ನಡುವೆ ಮಾನವೀಯ ಸಂಬಂಧ ಸರಿಇರಬೇಕು. ಎಲ್ಲರಲ್ಲೂ ಒಂದು ತಂಡವಾಗಿ ಕೆಲಸ ಮಾಡುವ ಮನೋಭಾವ ಕಟ್ಟೋಣ ಎಂದರು.
ಅಧಿಕಾರಿಗಳು ಮತ್ತು ನೌಕರರು ವೃತ್ತಿಪರತೆ ಬೆಳಸಿಕೊಳ್ಳಬೇಕು. ಇದಕ್ಕಾಗಿ ತರಬೇತಿ ಮತ್ತು ಸಂಶೋಧನೆಗೆ ಹೆಚ್ಚು ಒತ್ತು ನೀಡಲಾಗುವುದು.
ಪೊಲೀಸ್ ಡ್ಯೂಟಿ ಮೀಟ್ ಮಾದರಿಯಲ್ಲಿ ವಾರ್ತಾ ಇಲಾಖೆಯಲ್ಲಿ ಕುಟುಂಬದ ಸದಸ್ಯರೂ ಸೇರಿದಂತೆ ವರ್ಷದಲ್ಲಿ ಒಮ್ಮೆ ಎಲ್ಲರೂ ಸೇರಿ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಆಯೋಜಿಸುವ ಬಗ್ಗೆ ಆಲೋಚಿಸಲಾಗಿದೆ ಎಂದರು.
ಸಭೆಯಲ್ಲಿ ಉಪ ನಿರ್ದೇಶಕರಾದ ವಿನೋದ್ ಚಂದ್ರ, ಸಿ.ಆರ್. ನವೀನ್, ಸಹಾಯಕ ನಿರ್ದೇಶಕರಾದ ಆರ್. ರಾಜು, ಜೆ. ಮಂಜೇಗೌಡ, ಟಿ.ಕೆ. ಹರೀಶ್, ರಮೇಶ್, ಚಿನ್ನಸ್ವಾಮಿ, ಮಂಜುನಾಥ್, ವಿಷ್ಣುವರ್ಧನ್ ಪ್ರತಿಷ್ಠಾನದ ಕಾರ್ಯದರ್ಶಿ ವಿಜಯಾನಂದ ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment