ಬಾಡಿಗೆ ತಾಯ್ತನ ಮೂಲಕ ಅವಳಿ ಮಕ್ಕಳಿಗೆ ತಂದೆ-ತಾಯಿಯಾದ ನಟಿ ನಯನತಾರ, ನಿರ್ದೇಶಕ ವಿಘ್ನೇಶ್ ಶಿವನ್ ಅವರಿಗೆ ಸಂಕಷ್ಟ ಎದುರಾಗಿದೆ.
ಈ ಕುರಿತಂತೆ ತಮಿಳುನಾಡು ಸರ್ಕಾರ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿದೆ. ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ನಯನತಾರ, ವಿಘ್ನೇಶ್ ಶಿವನ್ ಮದುವೆಯಾಗಿದ್ದರು. ಆದ್ದರಿಂದ ಅವರು ಬಾಡಿಗೆ ತಾಯ್ತನ ಮೂಲಕ ಮಕ್ಕಳನ್ನು ಪಡೆಯಲು ಅರ್ಹರೆ..? ಅವರಿಗೆ ಕಾಲಮಿತಿ ಇಲ್ಲವೇ ಎಂದು ಸುದ್ದಿಗೋಷ್ಠಿಯಲ್ಲಿ ತಮಿಳುನಾಡು ಆರೋಗ್ಯ ಇಲಾಖೆ ಸಚಿವ ಸುಬ್ರಮಣ್ಯನ್ ಅವರಿಗೆ ಪ್ರಶ್ನಿಸಿದ್ದರು.
ಈ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ವಿಚಾರಣೆ ನಡೆಸಲು ಡೈರೆಕ್ಟರ್ ಆಫ್ ಮೆಡಿಕಲ್ ಸರ್ವೀಸ್ಗೆ ಆದೇಶ ಜಾರಿ ಮಾಡಿದ್ದೇವೆ ಬಾಡಿಗೆ ತಾಯ್ತನ ಮೂಲಕ ದಂಪತಿ ಮಕ್ಕಳು ಪಡೆದಿರುವ ಬಗ್ಗೆ ಅಧಿಕಾರಿಗಳು ವಿವರಣೆ ಪಡೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ತಮಗೆ ಅವಳಿ ಮಕ್ಕಳಿಗೆ ತಂದೆ-ತಾಯಿ ಆಗ್ತಿದ್ದೀವಿ ಎಂದು ಅಕ್ಟೋಬರ್ 09 ರಂದು ಪೋಸ್ಟ್ ಮಾಡಿದ್ದರು. ನಿಮ್ಮ ಪ್ರಾರ್ಥನೆ, ಪೂರ್ವಜರ ಆರ್ಶೀವಾದದಿಂದ ಅವಳಿ ಮಕ್ಕಳು ಜನಿಸಿದ್ದಾರೆ ಎಂದು ಹೇಳಿದ್ದರು. ಅವರಿಗೆ ಉಯ್ರ್ (ಜೀವನ), ಉಳಗಂ (ಪ್ರಪಂಚ) ಅಂತ ಹೆಸರಿಟ್ಟಿದ್ದಾಗಿ ತಿಳಿಸಿದ್ದರು. ಅಲ್ಲದೇ ಕಂದಮ್ಮಗಳ ಪಾದಗಳಿಗೆ ಮುತ್ತಿಡುತ್ತಿರೋ ಫೋಟೋಗಳನ್ನು ಶೇರ್ ಮಾಡಿದ್ದರು. ಆದರೆ ತಮ್ಮ ಪೋಸ್ಟ್ನಲ್ಲಿ ಎಲ್ಲಿಯೂ ನಯನತಾರ, ಬಾಡಿಗೆ ತಾಯ್ತನದ ಬಗ್ಗೆ ಉಲ್ಲೇಖ ಮಾಡಿಲ್ಲ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment