ರಾಜ್ಯ ಚುನಾವಣಾ ಆಯೋಗ ಸೋಮವಾರ ರಾಜ್ಯಾದ್ಯಂತ 188 ಗ್ರಾಮ ಪಂಚಾಯಿತಿಗಳ 430 ಸ್ಥಾನಗಳಿಗೆ ಚುನಾವಣೆಯನ್ನು ಪ್ರಕಟಿಸಿದೆ.
ಜುಲೈ 23 ರಂದು ಚುನಾವಣೆ ನಡೆಯಲಿದ್ದು, ಜುಲೈ 26 ರಂದು ಮತ ಎಣಿಕೆ ನಡೆಯಲಿದೆ. 14 ಗ್ರಾಮ ಪಂಚಾಯಿತಿಗಳ 207 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ವಿವಿಧ ಕಾರಣಗಳಿಂದ ತೆರವಾಗಿರುವ 174 ಗ್ರಾಮ ಪಂಚಾಯಿತಿಗಳ 223 ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಜು.6ಕ್ಕೆ ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲು, ನಾಮಪತ್ರಗಳನ್ನು ಸಲ್ಲಿಸಲು ಜು.12ರಂದು ಕೊನೆಯ ದಿನವಾಗಿದೆ. ಜು.13ರಂದು ನಾಮಪತ್ರಗಳನ್ನು ಪರಿಶೀಲಿಸಲು, ಜು.15ಕ್ಕೆ ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.
ಮತದಾನವನ್ನು ನಡೆಸಲು ಜು.23ಕ್ಕೆ ಸೂಚಿಸಲಾಗಿದೆ. ಮರು ಮತದಾನ ಅವಶ್ಯವಿದ್ದರೆ, ಮತದಾನವನ್ನು ಜು.25ಕ್ಕೆ ನಡೆಸಲು ಆಯೋಗ ತಿಳಿಸಿದೆ. ಜು.26ಕ್ಕೆ ಮತಗಳ ಎಣಿಕೆ ನಡೆಯಲಿದೆ.
ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜು.6 ಹಾಗೂ ಜು.26ರವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರಲಿದೆ.
ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಪ್ರಕಾಶ್ ಎಸ್. ಮುರಬಳ್ಳಿ ಈ ಕುರಿತು ಆದೇಶ ಹೊರಡಿಸಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 44(2)ರ ಪ್ರಕಾರ, ಜಿಲ್ಲಾಧಿಕಾರಿಗಳು ರಾಜ್ಯ ಚುನಾವಣಾ ಆಯೋಗದ ಸಾಮಾನ್ಯ ಹಾಗೂ ವಿಶೇಷ ಆದೇಶಕ್ಕೆ ಒಳಪಟ್ಟು ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿಯನ್ನು ನಿಗದಿಪಡಿಸಬೇಕಾಗಿರುತ್ತದೆ, ಮೀಸಲಾತಿ ನಿಗದಿಪಡಿಸುವಾಗ ಸೂಚನೆಗಳನ್ನು ಪಾಲಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು.
ಮೊದಲನೇ ಅವಧಿಯ ನಿಗದಿಪಡಿಸಿದ ಮೀಸಲಾತಿಗಳನ್ನು ಪರಿಗಣಿಸಿ 2020ನೇ ಸಾಲಿನ ಚುನಾವಣೆ ನಂತರದ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳನ್ನು ನಿಗದಿಪಡಿಸುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
- ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
- ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
- ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ
- Mandya : KSRTC ಬಸ್ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯ
- ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಪೂವನಹಳ್ಳಿ ಗ್ರಾಮ ಆಯ್ಕೆ
More Stories
ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ