ಮಂಡ್ಯದ ವಿಸಿ ಫಾರ್ಮ್ ಗೇಟ್ ಬಳಿ ಯಾರೋ ಇದಕ್ಕಿದ್ದ ಹಾಗೆ ಕ್ಯಾಂಟರ್ ವಾಹನದಲ್ಲಿ ಬಂದು ಸುಮಾರು 100ಕ್ಕೂ ಹೆಚ್ಚು ಕೆಜಿ ದ್ರಾಕ್ಷಿಯನ್ನು ಸುರಿದು ಹೋಗಿದ್ದಾರೆ. ದ್ರಾಕ್ಷಿ ಸುರಿಯುತ್ತಿದ್ದಂತೆ ಜನರು, ಆತ ಯಾಕೆ ಸುರಿಯುತ್ತಿದ್ದಾನೆ ಎಂದು ಕೇಳದೇ ನಾ ಮುಂದು ತಾ ಮುಂದು ಎಂದು ಬಾಚಿಕೊಳ್ಳಲು ಮುಂದಾಗಿದ್ದಾರೆ.
ಸದ್ಯ ದ್ರಾಕ್ಷಿಯ ಬೆಲೆ ಕೆಜಿಗೆ 70-80 ರೂಪಾಯಿ ಇದ್ದರೂ ಸಹ ಆ ವ್ಯಕ್ತಿ ರಸ್ತೆಗೆ ದ್ರಾಕ್ಷಿಯನ್ನು ಏಕೆ ಸುರಿದು ಹೋದ ಎಂಬ ಅನುಮಾನಗಳು ಮೂಡುತ್ತಿವೆ.
ಹಳ್ಳಿಯ ಜನರಲ್ಲದೇ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಜನರು ತಮ್ಮ ವಾಹನಗಳನ್ನು ನಿಲ್ಲಿಸಿ ದ್ರಾಕ್ಷಿಯನ್ನು ತುಂಬಿಕೊಂಡರು.
ಇದನ್ನು ಓದಿ : ಭೀಕರ ಕಾರು ಅಪಘಾತ : ಆಸೀಸ್ ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ದುರಂತ ಸಾವು
ಇಲ್ಲಿ ಸುಮ್ಮನೆ ಎಸೆದು ಹೋಗಿದ್ದಾರೆ, ಅವೆಲ್ಲವೂ ಹಾಳಾಗುತ್ತದೆ. ಅದಕ್ಕೆ ನಾವಾದರೂ ತಿನ್ನಬಹುದು ಎಂದು ತುಂಬಿಕೊಂಡು ಹೋಗುತ್ತಿದ್ದೇವೆ ಎಂದು ಜನ ಹೇಳಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು