ಇದನ್ನು ಓದಿ –ಬೆಳಗಾವಿಯ ರೀನಾ, ಇಬ್ಬರು ಮಕ್ಕಳ ಕೊಲೆ ಆರೋಪಿ ಪ್ರವೀಣ್ ಭಟ್ ನಿರ್ದೋಷಿ : ಹೈಕೋರ್ಟ್
ವರನನ್ನು ಮನೀಶ್ ಮಧೇಶಿಯಾ ಎಂದು ಹಾಗೂ ಮೃತ ಸ್ನೇಹಿತನನ್ನು ಬಾಬು ಲಾಲ್ ಯಾದವ್ ಎಂದು ಗುರುತಿಸಲಾಗಿದೆ. ವರ ಮತ್ತು ಮೃತ ಸ್ನೇಹಿತ ಯೋಧನಾಗಿದ್ದು, ಇವರಿಬ್ಬರು ಸ್ನೇಹಿತರು.
ವರ ಮನೀಶ್ ಮಧೇಶಿಯಾ ರಥದಲ್ಲಿ ಮೆರವಣಿಗೆ ಹೋಗುತ್ತಿದ್ದಾಗ ಗುಂಡು ಹಾರಿಸಿದ್ದಾನೆ. ಆ ಗುಂಡು ಸ್ನೇಹಿತ ಬಾಬು ಲಾಲ್ ಯಾದವ್ ಅವರಿಗೆ ತಗುಲಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗುಂಡು ಹಾರಿಸಿದ ತಕ್ಷಣ, ಯಾದವ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆ ವೇಳೆ ಅವರು ಸಾವನ್ನಪ್ಪಿದರು ಎಂದು ಸೋನ್ಭದ್ರಾ ಪೊಲೀಸ್ ವರಿಷ್ಠಾಧಿಕಾರಿ ಅಮರೇಂದ್ರ ಪ್ರತಾಪ್ ಸಿಂಗ್ ಹೇಳಿದ್ದಾರೆ.
ಸ್ನೇಹಿತ ಬಾಬು ಲಾಲ್ ಕುಟುಂಬದವರು ಈ ಸಂಬಂಧ ವರನ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ವರನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಗುಂಡಿನ ದಾಳಿಗೆ ಬಳಸಿದ್ದ ಬಂದೂಕನ್ನೂ ವಶಪಡಿಸಿಕೊಳ್ಳಲಾಗಿದೆ.
ಮದುವೆ ಮತ್ತು ದೇಗುಲ ಸೇರಿದಂತೆ ಯಾವುದೇ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಲೈಸನ್ಸ್ ಪಡೆದ ಬಂದೂಕುಗಳಿದ್ದರೂ ಸಹ ಸಂಭ್ರಮದಿಂದ ಗುಂಡು ಹಾರಿಸುವುದು ಭಾರತದಲ್ಲಿ ಕ್ರಿಮಿನಲ್ ಅಪರಾಧವಾಗಿದೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment