Trending

ಡಿಕೆಶಿಯವರನ್ನು ಭೇಟಿಯಾದ ಜಿ.ಟಿ. ದೇವೇಗೌಡ

‘ಡಿಕೆಶಿ ನನ್ನ ಬಹಳ ದಿನದ ಸ್ನೇಹಿತರು. ಮೊನ್ನೆ ಅವರ ಮನೆ ಸೇರಿ 14 ಕಡೆ ದಾಳಿ ಮಾಡಿದ್ದರಿಂದ ಅವರು ನೊಂದುಕೊಂಡಿದ್ದಾರೆ. ಹಾಗಾಗಿ ನಾನು ಅವರನ್ನು ಭೇಟಿಯಾಗಲು ಬಂದಿದ್ದೆ’ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿದರು.

ಸದಾಶಿವನಗರದ ಡಿಕೆಶಿ ಮನೆಯಲ್ಲಿ ಅವರನ್ನು ಭೇಟಿಯಾದ ಜಿ.ಟಿ. ದೇವೇಗೌಡ ಅವರು 1 ಗಂಟೆಗೂ ಹೆಚ್ಚು ಕಾಲ ಅವರ ಜೊತೆ ಚರ್ಚೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ‘ನನ್ನ ಹಾಗೂ ಡಿಕೆಶಿ ಅವರ ಸ್ನೇಹ ಬಹಳ ದಿನಗಳದ್ದು. ಜೆಡಿಎಸ್-ಕಾಂಗ್ರೆಸ್ ಸಂಮಿಶ್ರ ಸರ್ಕಾರವಿದ್ದಾಗ ನಾವು ಇಬ್ಬರೂ ಸಚಿವರಾಗಿ ಕೆಲಸ ಮಾಡಿದ್ದೇವೆ. ಆಗ ಶಾಸಕರು ಪಕ್ಷಾಂತರ ಆಗುವ ಉದ್ದೇಶದಿಂದ ಬಾಂಬೆ ಮತ್ತು ಹೈದರಾಬಾದ್‌ಗಳಿಗೆ ಹೋಗಿ ಕುಳಿತಿದ್ದರು. ಅವರನ್ನು ಕರೆತರುವ ಪ್ರಯತ್ನವನ್ನು ನಾವಿಬ್ಬರೂ ಮಾಡಿದ್ದೆವು. ಇಂತಹ ಸಮಯದಲ್ಲಿ ಸಿಬಿಐ ರೈಡ್ ಆಗಬಾರದಿತ್ತು. ಇದು ತಪ್ಪು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ’ ಎಂದು ಹೇಳಿದರು.

ಪ್ರಸ್ತುತ ಜಿಟಿಡಿ ಜೆಡಿಎಸ್ ಶಾಸಕರಾಗಿದ್ದರೂ ಪಕ್ಷದಿಂದ ಹಿನ್ನೆಲೆಯಲ್ಲಿ ಉಳಿದುಕೊಂಡಿದ್ದಾರೆ. ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಅವರು ‘ನನಗೆ ಉಪಮುಖ್ಯಮಂತ್ರಿಯಾಗುವ ಆಸೆ ಇರಲಿಲ್ಲ. ಆಗುವ ಹಾಗಿದ್ದರೆ ಬಿಜೆಪಿಯಿಂದಲೇ ಆಗುತ್ತಿದ್ದೆ. ನನಗೇ ಮೊದಲ ಆಫರ್ ಬಂದಿತ್ತು. ಆದರೆ ನಾವೆಲ್ಲ ಸೇರಿಕೊಂಡು ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯಾಗಿ ಮಾಡಿದೆವು. ಅಂತಹ ನಾವೇ ಅವರನ್ನು ಕುರ್ಚಿಯಿಂದ ಕೆಳಗಡೆ ಇಳಿಸ್ತೀವಾ?’ ಎಂದು ಹೇಳಿ ಜೆಡಿಎಸ್ ಮೇಲೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಮುಂದಿನ ಚುಣಾವಣೆಯ ಬಗ್ಗೆ ಮಾತನಾಡಿದ ಅವರು, ‘ಚುಣಾವಣೆಗೆ ಇನ್ನೂ ಎರಡೂವರೆ ವರ್ಷ ಇದೆ. ಜನರು ನನ್ನನ್ನು ಒಂದೂವರೆ ಲಕ್ಷ ಮತಗಳಿಂದ ಗೆಲ್ಲಿಸಿದ್ದಾರೆ. ನಾನು ಆವಾಗ ಯಾವ ಪಕ್ಷದ ಮೂಲಕ ಚುಣಾವಣೆಗೆ ನಿಲ್ಲುತ್ತೇನೋ? ಅದು ಕ್ಷೇತ್ರದ ಮತದಾರರಿಗೆ ಬಿಟ್ಟದ್ದು’ ಎಂದು ಮಾರ್ಮಿಕವಾಗಿ ಹೇಳಿದರು.

Team Newsnap
Leave a Comment
Share
Published by
Team Newsnap
Tags: DKshivakumar

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

May 3, 2024

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024