ಜೋಸ್ ಬಟ್ಲರ್ ಉತ್ತಮ ಬ್ಯಾಟಿಂಗ್ ನೆರವಿನಿಂದ ಗುಜರಾತ್ ಟೈಟನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡವು 189 ರನ್ ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ಸ್ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 188 ರನ್ ಗಳಿಸಿದೆ.
ಇತ್ತ ಗುಜರಾತ್ ಪರ ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ, ಆರ್.ಸಾಯಿ ಕಿಶೋರ್ ಹಾಗೂ ಯಶ್ ದಯಾಳ್ ತಲಾ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಗೆಲ್ಲಲು 189 ರನ್ಗಳ ಗುರಿಯನ್ನು ಪಡೆದ ಗುಜರಾತ್ ಡೇವಿಡ್ ಮಿಲ್ಲರ್ ಅವರ ಸ್ಫೋಟಕ ಅರ್ಧಶತಕ ಮತ್ತು ನಾಯಕ ಹಾರ್ದಿಕ್ ಪಾಂಡ್ಯ ಸಾಹಸದಿಂದ 19.3 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 191 ರನ್ ಹೊಡೆದು ಫೈನಲ್ ಪ್ರವೇಶಿಸಿತು. ಟೂರ್ನಿಯ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಗುಜರಾತ್ ಈಗ ಮೊದಲ ಐಪಿಎಲ್ ಸರಣಿಯಲ್ಲೇ ಫೈನಲ್ ಪ್ರವೇಶಿಸಿ ವಿಶಿಷ್ಟ ಸಾಧನೆ ಮಾಡಿದೆ.
ಮೊದಲ ಓವರಿನ ಎರಡನೇ ಎಸೆತದಲ್ಲಿ ವೃದ್ಧಿಮಾನ್ ಸಹಾ ಅವರ ವಿಕೆಟ್ ಕಳೆದುಕೊಂಡರೂ ಶುಭಮನ್ ಗಿಲ್ ಮತ್ತು ಮ್ಯಾಥ್ಯು ವೇಡ್ ಎರಡನೇ ವಿಕೆಟ್ಗೆ 72 ರನ್ ಜೊತೆಯಾಟವಾಡಿ ಚೇತರಿಕೆ ನೀಡಿದರು. ಶುಭಮನ್ ಗಿಲ್ 35 ರನ್(21 ಎಸೆತ, 6 ಬೌಂಡರಿ, 1 ಸಿಕ್ಸರ್) ಮ್ಯಾಥ್ಯು ವೇಡ್ 35 ರನ್(30 ಎಸೆತ, 6 ಬೌಂಡರಿ) ಹೊಡೆದು ಔಟಾದರು.
ನಂತರ ಜೊತೆಯಾದ ಹಾರ್ದಿಕ್ ಪಾಂಡ್ಯ ಮತ್ತು ಡೇವಿಡ್ ಮಿಲ್ಲರ್ ಮುರಿಯದ 4ನೇ ವಿಕೆಟ್ಗೆ 61 ಎಸೆತಗಳಿಗೆ 106 ರನ್ ಚಚ್ಚಿ ತಂಡಕ್ಕೆ ಗೆಲುವನ್ನು ತಂದುಕೊಟ್ಟರು. ಡೇವಿಡ್ ಮಿಲ್ಲರ್ 68 ರನ್(38 ಎಸೆತ, 3 ಬೌಂಡರಿ, 5 ಸಿಕ್ಸರ್) ಹಾರ್ದಿಕ್ ಪಾಂಡ್ಯ 40 ರನ್(27 ಎಸೆತ, 5 ಬೌಂಡರಿ) ಹೊಡೆದು ತಂಡವನ್ನು ಗೆಲುವಿನ ದಡ ಸೇರಿಸಿದರು.
ಕೊನೆಯ ಓವರ್ನಲ್ಲಿ ಮಿಲ್ಲರ್ ಸತತ 3 ಸಿಕ್ಸರ್ಗಳನ್ನು ಸಿಡಿಸಿದರು, ಕ್ವಾಲಿಫೈಯರ್ 1 ರಲ್ಲಿ ಜಿಟಿ ಏಳು ವಿಕೆಟ್ಗಳಿಂದ ಆರ್ಆರ್ ಅನ್ನು ಸೋಲಿಸಿತು ಅವರ ಮೊದಲ ಬಾರಿಗೆ IPL 2022 ಫೈನಲ್ ತಲುಪಲು ಋತು. ಡೇವಿಡ್ ಮಿಲ್ಲರ್ ಮೂರು ಸಿಕ್ಸರ್ಗಳನ್ನು ಸಿಡಿಸಿದರು ಕೊನೆಯ ಓವರ್ನಲ್ಲಿ ಜಿಟಿ 189 ರನ್ಗಳನ್ನು ಬೆನ್ನಟ್ಟಿದರು ಪಂದ್ಯ ಗೆಲ್ಲಲು 19.3 ಓವರ್ಗಳಲ್ಲಿ ಗುರಿ. RR ತಿನ್ನುವೆ ಈಗ ನಡುವೆ ಎಲಿಮಿನೇಟರ್ ವಿಜೇತ ಎದುರಿಸಲು ಶುಕ್ರವಾರ ನಡೆದ ಕ್ವಾಲಿಫೈಯರ್ 2ರಲ್ಲಿ RCB ಮತ್ತು LSG.
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
This website uses cookies.
Leave a Comment