- 12 ಸ್ಥಾನ ಜಿಟಿಡಿ ಬಣಕ್ಕೆ, 3 ಸ್ಥಾನ ಎಚ್ಡಿಕೆ ಬಣಕ್ಕೆ: ಹಾಲಿ ಅಧ್ಯಕ್ಷರಿಗೆ ಸೋಲು
ಪ್ರತಿಷ್ಠೆಯ ಕಣವಾಗಿದ್ದ ಮೈಮುಲ್ (ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ) ಚುನಾವಣೆಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಣಕ್ಕೆ ಹಿನ್ನಡೆಯಾಗಿದೆ.
ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಬಣ ಭರ್ಜರಿ ಗೆಲುವು ಸಾಧಿಸಿದೆ.
ಒಟ್ಟು 15 ಸ್ಥಾನಗಳಲ್ಲಿ 12 ಸ್ಥಾನಗಳನ್ನು ಜಿಟಿಡಿ ಬಣ ಗೆದ್ದರೆ 3 ಸ್ಥಾನಗಳಿಗೆ ಹೆಚ್ಡಿಕೆ ಬಣ ಸಮಾಧಾನ ಪಟ್ಟುಕೊಂಡಿದೆ.
ಆದರೆ ಅಧ್ಯಕ್ಷ ಸ್ಥಾನ ಎಚ್ಡಿಕೆ ಬಣದ ಪಾಲಾಗಿದೆ. ಹಾಲಿ ಅಧ್ಯಕ್ಷ ಜಿಟಿಡಿ ಆಪ್ತ ಮಾವನಹಳ್ಳಿ ಸಿದ್ದೇಗೌಡ ಅವರಿಗೆ ಸೋಲಾಗಿದೆ.
ಹುಣಸೂರು ಉಪವಿಭಾಗದ ಎಂಟಕ್ಕೆ ಎಂಟೂ ಸ್ಥಾನಗಳಲ್ಲಿ ಜಿಟಿಡಿ ಬಣ ಗೆದ್ದಿದ್ದು, ಮಾಜಿ ಸಚಿವ ಎಚ್.ಡಿ.ರೇವಣ್ಣ ಸಂಬಂಧಿ ಪಿರಿಯಾಪಟ್ಟಣ ಶಾಸಕ ಮಹದೇವು ಪುತ್ರನಿಗೆ ಸೋಲಾಗಿದೆ.
ಎಚ್.ಡಿ.ಕುಮಾರಸ್ವಾಮಿ ಪ್ರಚಾರದ ನಡುವೆಯೂ ಪ್ರಸನ್ನ ಗೆದ್ದಿದ್ದಾರೆ.
ಜಿಟಿಡಿ ಹಾಗೂ ಮಾಜಿ ಕುಮಾರಸ್ವಾಮಿಗೆ ಪ್ರತಿಷ್ಠೆಯಯಾಗಿದ್ದ ಈ ಚುನಾವಣೆಯ ಒಟ್ಟು 1,052 ಮತದಾರರ ಪೈಕಿ 1,051 ಸದಸ್ಯರು ಮತದಾನ ಮಾಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ