ಕೊರೊನಾ ಕಾರಣದಿಂದ ಕಾಲೇಜುಗಳು ಬಾಗಿಲು ಮುಚ್ಚಿವೆ. ಇದರಿಂದ ಕೆಲಸ ಕಳೆದುಕೊಂಡಿರುವ ಅತಿಥಿ ಉಪನ್ಯಾಸಕ ಈಗ ಕುರಿ ಕಾಯುವ ಕಾಯಕ ಮಾಡುತ್ತಿದ್ದಾರೆ.
ರಾಯಚೂರು ಜಿಲ್ಲೆ ಯ ಅತಿಥಿ ಉಪನ್ಯಾಸಕರೊಬ್ಬರು ದಿನಗೂಲಿ ಕುರಿಗಾಯಿಯಾಗಿ ಕೆಲಸ ಮಾಡುತ್ತಿದ್ದಾರೆ. ಆರ್ಥಿಕ ಸಂಕಷ್ಟ ನಿಭಾಯಿಸಲು ನಿತ್ಯ 200ರು ಕೂಲಿಯಂತೆ ಕುರಿ ಮೇಯಿಸಲು ಹೋಗುತ್ತಿದ್ದಾರೆ.
ಕಳೆದ 9 ವರ್ಷಗಳಿಂದ ಅತಿಥಿ ಉಪನ್ಯಾಸಕನಾಗಿ ಸೇವೆ ಸಲ್ಲಿಸುತ್ತಿರುವ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹುಲಿಗುಡ್ಡ ಗ್ರಾಮದ ವೀರನಗೌಡ ವೇತನವಿಲ್ಲದೇ ಸಂಕಷ್ಟಕ್ಕೆ ಒಳಗಾಗಿ ಕುರಿ ಮೇಯಿಸುತ್ತಿದ್ದಾರೆ. ಎಂಎ, ಬಿಎಡ್ ಪದವೀಧರ ವೀರನಗೌಡ ಸರ್ಕಾರಿ ಪದವಿ ಕಾಲೇಜು ಮಸ್ಕಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು.
ಇಬ್ಬರು ಮಕ್ಕಳಿರುವ, ಕೂಡು ಕುಟುಂಬದ ವೀರನಗೌಡ ಸಿಇಟಿ ಹಾಗೂ ಕೆಸೆಟ್ ಸಹ ಮಾಡಿಕೊಂಡಿದ್ದಾರೆ. ಕಳೆದ ಆರೇಳು ತಿಂಗಳಿಂದ ವೇತನ ಇಲ್ಲದೇ ಆರ್ಥಿಕ ಸಂಕಷ್ಟದಲ್ಲಿರುವ ವೀರನಗೌಡ ಆರ್ಥಿಕ ಸಂಕಷ್ಟ ನಿಭಾಯಿಸಲು ಕಾಡು, ಮೇಡು ಅಲೆದು ಕುರಿ ಕಾಯುತ್ತಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರ ಕಡೆ ಗಮನಹರಿಸಬೇಕು ಅಂತ ವೀರನಗೌಡ ಮನವಿ ಮಾಡಿದ್ದಾರೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
View Comments
Nothing wrong with his current activity,let us stop linking education to
Profession.Even after 9 years if he cant settle as teacher it speaks about his quality of teaching