ದಲಿತ ನಾಯಕ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಎನ್ಸಿಪಿ ನಾಯಕಿ ರೇಷ್ಮಾ ಪಟೇಲ್ಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿ ಗುಜರಾತ್ ಕೋರ್ಟ್ ಆದೇಶಿಸಿದೆ.
ಜುಲೈ 11, 2016ರಲ್ಲಿ ಗುಜರಾತ್ನ ಉನಾದಲ್ಲಿ 7 ಮಂದಿ ದಲಿತ ಯುವಕರ ಮೇಲೆ ಅಮಾನುಷವಾಗಿ ಹಲ್ಲೆ ನಡೆದಿತ್ತು. ಈ ಘಟನೆ ನಡೆದು ಒಂದು ವರ್ಷ ಪೂರೈಸಿದ ದಿನದಂದು ಅಂದರೆ 2017ರಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗೆ ಅನುಮತಿ ಪಡೆಯದಿರುವ ಆರೋಪ ಮೇವಾನಿ ಹಾಗೂ ಪ್ರತಿಭಟನಾಕಾರರ ಮೇಲಿತ್ತು.
ಪ್ರತಿಭಟನಾ ಮೆರವಣಿಗೆಗೆ ಅನುಮತಿ ಪಡೆಯದಿರುವ ವಿಚಾರದಲ್ಲಿ ಗುಜರಾತ್ ಕೋರ್ಟ್ ಒಟ್ಟು 11 ಆರೋಪಿಗಳು ತಪ್ಪಿತಸ್ಥರು ಎಂದು ಹೇಳಿದೆ. ಮಾತ್ರಲ್ಲ ಮೂರು ತಿಂಗಳ ಜೈಲು ಹಾಗೂ ತಲಾ ಒಂದು ಸಾವಿರ ರೂಪಾಯಿ ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ