February 21, 2026

Newsnap Kannada

The World at your finger tips!

guhati

ಹಳಿತಪ್ಪಿದ ಗುವಾಹಟಿ-ಬಿಕನೇರ್‌ ಎಕ್ಸ್‌ಪ್ರೆಸ್‌ ರೈಲು – ಮೂವರು ಸಾವು : 15 ಮಂದಿಗೆ ಗಾಯ

Spread the love

ಪಶ್ಚಿಮ ಬಂಗಾಳದ ದೊಮೊಹಾನಿ ಬಳಿ ಗುವಾಹಟಿ-ಬಿಕನೇರ್‌ ಎಕ್ಸ್‌ಪ್ರೆಸ್‌ ರೈಲು ಹಳಿತಪ್ಪಿ ಮೂವರು ಸಾವನ್ನಪ್ಪಿದ್ದು 15 ಮಂದಿ ಗಾಯಗೊಂಡ ಘಟನೆ ಜರುಗಿದೆ.

ಅಪಘಾತದಲ್ಲಿ ಮೂವರ ಸಾವಿಗೀಡಾಗಿದ್ದು, ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಗಾಯಗೊಂಡಿದ್ದ 12 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ 30 ಆಂಬುಲೆನ್ಸ್‌ಗಳು ಆಗಮಿಸಿದೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಅಪಘಾತ ಕುರಿತು ಉನ್ನತ ಮಟ್ಟದ ರೈಲ್ವೆ ಆಯುಕ್ತರು ತನಿಖೆಗೆ ಆದೇಶಿಸಿದ್ದಾರೆ.

ರೈಲ್ವೆ ಮಂಡಳಿ ಅಧ್ಯಕ್ಷ ಮತ್ತು ಡಿಜಿ ದೆಹಲಿಯಿಂದ ಅಪಘಾತ ಸ್ಥಳಕ್ಕೆ ತೆರಳಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ 5 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ ರೂ. ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ 25,000 ರೂ. ಪರಿಹಾರ ಘೋಷಿಸಲಾಗಿದೆ.

ರೈಲಿನ ಕನಿಷ್ಠ ಐದು ಬೋಗಿಗಳು ಹಳಿತಪ್ಪಿವೆ. ಒಂದು ಬೋಗಿ ಮಗುಚಿ ಬಿದ್ದಿದೆ ಎಂದು ಈಶಾನ್ಯ ಫ್ರಾಂಟಿಯರ್‌ ರೈಲ್ವೆ ಮೂಲಗಳು ತಿಳಿಸಿವೆ.

error: Content is protected !!