Main News

ಶಿಸ್ತು,ದಕ್ಷತೆಯ ಅಪ್ರತಿಮ ಆಡಳಿತಗಾರ ಮಂಡ್ಯದ ಮುತ್ಸದ್ದಿ ಎಚ್. ಡಿ .ಚೌಡಯ್ಯ ಅಸ್ತಂಗತ

ಜನತಾ ಶಿಕ್ಷಣ ಸಂಸ್ಥೆಯ (ಪಿಇಟಿ ) ಮಾಜಿ ಅಧ್ಯಕ್ಷ , ಮಾಜಿ ಶಾಸಕ, ಹಿರಿಯ ಮತ್ಸದ್ದಿ, ಬದ್ದತೆ, ದಕ್ಷ , ಶಿಸ್ತಿನ ಆಡಳಿತ
ಎಚ್ ಡಿ ಚೌಡಯ್ಯನವರು (94) ಮಂಗಳವಾರ ಮಧ್ಯರಾತ್ರಿ ನಂತರ 2.30 ರ ಸುಮಾರಿಗೆ ಸ್ವ ಗ್ರಾಮ ಹೊಳಲಿನಲ್ಲಿ ಕೊನೆಯುಸಿರೆಳೆದರು.

ಪತ್ನಿ ದೊಡ್ಡಲಿಂಗಮ್ಮನವರ ಅಗಲಿಕೆಯ ನಂತರ ತೀವ್ರವಾಗಿ ಕ್ಷಿಣಿಸಿದ್ದ ಚೌಡಯ್ಯನವರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು. ಅಪಾರ ಬಂಧು ಬಳಗ, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

1928 ರಲ್ಲಿ ಜನಿಸಿದ ಚೌಡಯ್ಯ ಬಿಎಸ್ಸಿ (ಅಗ್ರಿ) ಪದವೀಧರರಾಗಿದ್ದರು. ಆಗಿನ ಕಾಲದಲ್ಲಿ ತಾಲೂಕು ಬೋರ್ಡ್ ಮೆಂಬರ್ ಹಾಗೂ ಅಧ್ಯಕ್ಷರಾಗುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿ 4 ಬಾರಿ ಕೆರಗೋಡು ಕ್ಷೇತ್ರದ ಶಾಸಕರಾಗಿ, 2ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

1989 ರಲ್ಲಿ ಮಂಡ್ಯದ ಪಿಎಸ್ ಇ ಟ್ರಸ್ಟ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಚೌಡಯ್ಯನರು 31 ವಷ೯ಗಳ ಕಾಲ ಸುದೀರ್ಘ ಆಡಳಿತ ನಡೆಸಿದರು. ನಿತ್ಯ ಸಚಿವ ದಿ ಕೆ ವಿ ಶಂಕರಗೌಡರು ಹಾಗೂ ಚೌಡಯ್ಯನವರ ನಡುವೆ ಸಾಕಷ್ಟು ಭಿನ್ನಾಭಿಪ್ರಾಯಗಳಿದ್ದರೂ ಶಂಕರಗೌಡರು ಮಾತ್ರ ಚೌಡಯ್ಯನವರನ್ನೇ ಉತ್ತರ ಅಧಿಕಾರಿ ಮಾಡಿ ಪಿಇಎಸ್ ಟ್ರಸ್ಟ್ ನ ಸಮಗ್ರ ಅಭಿವೃದ್ದಿಗೆ ಕಾರಣರಾದರು.

ಆಡಳಿತದಲ್ಲಿ ದಕ್ಷತೆ , ಶಿಸ್ತು , ಬದ್ದತೆ ರೂಢಿಸಿಕೊಂಡೇ ರಾಜಕಾರಣ ಮತ್ತು ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬಂದ ಚೌಡಯ್ಯನವರಿಗೆ ಅಪಾರ ಅಭಿಮಾನಿ ಬಳಗವಿದೆ. ನಿತ್ಯ ಸಚಿವ ದಿ ಶಂಕರಗೌಡರು , ಜಿ ಮಾದೇಗೌಡರು, ಕರಡಹಳ್ಳಿ ಶಿಂಗಾರಿಗೌಡರು,ಎಸ್ ಎಂ ಕೃಷ್ಣ ಸೇರಿದಂತೆ ಮಂಡ್ಯದ ಅನೇಕ ಮುತ್ಸದ್ದಿ ರಾಜಕಾರಣಿಗಳ ಜೊತೆ ಒಂದೇ ಗರಡಿಯಲ್ಲಿ ಬೆಳೆದ ಚೌಡಯ್ಯನವರು ಮಂಡ್ಯದ ಪ್ರಗತಿಗೆ ಅಪಾರ ಕೊಡುಗೆ ನೀಡಿದ್ದಾರೆ.

ಮಂಡ್ಯದ ತೂಬಿನಕೆರೆಯಲ್ಲಿ ಮೈಸೂರು ವಿಶ್ವ ವಿದ್ಯಾಲಯದ ಘಟಕ ಸ್ಥಾಪಿಸಲು, ಮಂಡ್ಯದ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ,ಸೇರಿದಂತೆ ಮಂಡ್ಯದ ಅಭಿವೃದ್ದಿಗೆ ಪ್ರಮುಖ ಪಾತ್ರವಹಿಸಿದ್ದರು.

ರಾಜಕಾರಣ ಮಾತ್ರವಲ್ಲದೇ ಶಿಕ್ಷಣ , ಕ್ರೀಡೆ, ರಂಗಭೂಮಿ ಕ್ಷೇತ್ರ ಸೇರಿ ಗ್ರಾಮೀಣ ಪ್ರದೇಶದ ನಾಟಕಗಳಿಗೆ ಪ್ರೋತ್ಸಾಹ ನೀಡಿ ಸೈ ಎನಿಸಿಕೊಂಡ ಚೌಡಯ್ಯ, ಬದುಕಿದ್ದಾಗಲೇ ಪಿಇಎಸ್ ಎಂಜನಿಯರಿಂಗ್ ಕಾಲೇಜಿನ ಆವರಣದಲ್ಲಿ ಪ್ರತಿಮೆ ಸ್ಥಾಪನೆ ಮಾಡಿಕೊಂಡು ವಿವಾದವನ್ನು ಮಾಡಿಕೊಂಡರು.

ಕಾವೇರಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಚೌಡಯ್ಯನವರು ನೀರಿನ ಹಕ್ಕಿಗಾಗಿ ಪ್ರತಿಭಟನೆ ಚಳುವಳಿ ಹೋರಾಟಗಳಲ್ಲೂ ಪಾಲ್ಗೊಂಡು ರೈತರ ಹಿತರಕ್ಷಣೆ ಮಾಡಿದ ಕೀರ್ತಿಯೂ ಚೌಡಯ್ಯನವರದಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024