ಪೇಜಾವರ ಶ್ರೀ ಕುರಿತು ಹೇಳಿಕೆ ದಾಖಲಿಸಲು ಪೊಲೀಸ್ ಠಾಣೆಗೆ ಭೇಟಿ ಹೇಳಿಕೆ ನೀಡುವ ವೇಳೆ ಮಾಹಾಗುರು, ಸಂಗೀತ ನಿರ್ದೇಶಕ ಹಂಸಲೇಖ ಕಣ್ಣೀರಿಟ್ಟಿದ್ದಾರೆ.
ಬಹಿರಂಗವಾಗಿ ಸಭೆಯಲ್ಲಿ ಶ್ರೀಗಳ ಅಪಚಾರವಾಗುವಂತೆ
ಯಾಕೆ ಹೀಗೆ ಹೇಳಿಕೆ ನೀಡಿದಿರಿ ಎಂಬ ಪ್ರಶ್ನೆಗೆ ಉತ್ತರಿಸಿದ ಹಂಸಲೇಖ ಅವರು, ಯಾಕೆ ಹಾಗೇ ಹೇಳಿದೆನೋ ನಂಗ ಗೊತ್ತೇ ಆಗಲಿಲ್ಲ. ಯಾವ ಉದ್ದೇಶವು ಇರಲಿಲ್ಲ ಎಂದು ಪೋಲಿಸರ ಮುಂದೆ ಹೇಳಿಕೆ ನೀಡಿದರಂತೆ.
ನಾನು ಆ ಸಮಾರಂಭದಲ್ಲಿ
ಮಾತನಾಡುವ ಭರಾಟೆಯಲ್ಲಿ ಹಾಗೆ ಹೇಳಿಬಿಟ್ಟೇ. ನನ್ನ ಹೇಳಿಕೆಗೆ ನನ್ನ ಹೆಂಡತಿಯೇ ಬೇಸರ ವ್ಯಕ್ತಪಡಿಸಿದಳು. ನನ್ನ 70 ವರ್ಷದ ಜೀವನದಲ್ಲಿ ಎಂದಿಗೂ ಹೀಗೆ ಮಾಡಿಕೊಂಡಿರಲಿಲ್ಲಾ. ತಪ್ಪಾಗಿದೆ ಎಂದು ಹೇಳಿದರಂತೆ.
ನನ್ನ ಹೇಳಿಕೆಯಿಂದ ಯಾವ ಧರ್ಮ, ಜಾತಿಯ ನಿಂದಿಸುವ ಉದ್ದೇಶ ಇರಲಿಲ್ಲ ಎಂದು ಹೇಳಿದರಂತೆ.
ಈ ಘಟನೆಯಿಂದ ತನಗೆ ತುಂಬಾ ನೋವಾಗಿದೆ. ನನ್ನ ಕೆಲಸದಲ್ಲೂ ಸೆಟ್ ಬ್ಯಾಕ್ ಆಗಿದೆ. ನಾನು ಈ ಘಟನೆಯಿಂದ ತುಂಬಾ ನೋವು ಅನುಭವಿಸಿದ್ದೇನೆ ಎಂದು ತನಿಖಾಧಿಕಾರಿಗಳ ಮುಂದೆ ಕಣ್ಣೀರಿಟ್ಟರಂತೆ. ನಂತರ ಒಂದೈದು ನಿಮಿಷ ಸುಧಾರಿಸಿಕೊಂಡು ಠಾಣೆಯಿಂದ ಹೊರಟು ಹೋದರು.
ಠಾಣೆಯಿಂದ ಹೊರಡುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ
ಹಂಸಲೇಖ ಅವರು, ಏನು ಇಲ್ಲಮ್ಮ, ಏನು ಇಲ್ಲ ತಾಯಿ, ಎಲ್ಲರಿಗೂ ನಮಸ್ಕಾರ ಎಂದು ಕೈ ಮುಗಿದು ಹೊರಟರು.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment