ಪೇಜಾವರ ಶ್ರೀಗಳ ಕುರಿತಂತೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ನೀಡಿದ್ದ ಹೇಳಿಕೆ ಸಂಬಂಧ ಇಂದು ವಿಚಾರಣೆಗಾಗಿ ಬೆಂಗಳೂರಿನ ಬಸವನಗುಡಿ ಪೋಲಿಸ್ ಠಾಣೆಗೆ ಆಗಮಿಸಿದರು.
ತಮ್ಮ ವಕೀಲರೊಂದಿಗೆ ಹಂಸಲೇಖ ಪೊಲೀಸ್ ಠಾಣೆಗೆ ಆಗಮಿಸಿದರು ಕೊತೆಯಲ್ಲಿ ನಟ ಚೇತನ್
ಆಗಮಿಸಿದ ಹಿನ್ನೆಲೆಯಲ್ಲಿ ಪರ ವಿರೋಧದ ಗುಂಪುಗಳ ನಡುವೆ ವಾಗ್ವಾದ ನಡೆಯುತ್ತಿದೆ. ಈ ನಡುವೆ ನಟ ಚೇತನ್ ಠಾಣೆ ಪ್ರವೇಶಕ್ಕೆ ಪೋಲಿಸರು ತಡೆ ನೀಡಿದರು .
ಹಿಂದೂ ಪರ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ. ಹಂಸಲೇಖ ಪರವಾಗಿಯೂ ಪ್ರಗತಿಪರರ ಗುಂಪು ಸೇರಿದೆ.
ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಬಳಿ ಬೀಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಜರಂಗದಳದ ಮುಖಂಡ ತೇಜಸ್, ಹಂಸಲೇಖ ಕ್ಷಮೆ ಕೇಳಿದರೇ ಆಗೋದಿಲ್ಲ. ಬೇಷರತ್ತು ಕ್ಷಮೆಯಾಚಿಸಬೇಕು.
ಈ ವಿಷಯದಲ್ಲಿ ನಟ ಚೇತನ್ ಬರುವ ಅವಶ್ಯಕತೆ ಇಲ್ಲ. ಚೇತನ್ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಚೇತನ್ ಈ ದೇಶದ ನಾಗರಿಕ ಅಲ್ಲ. ಸಸ್ಯಾಹಾರಿ ಹಾಗೂ ಮಾಂಸಹಾರಿಗಳನ್ನು ಒಡೆಯುವ ಕೆಲಸವನ್ನು ಚೇತನ್ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಪೋಲಿಸ್ ಠಾಣೆ ಒಳಗೆ ಚೇತನ್ ಅವರನ್ನು ಬಿಡಬಾರದು. ಚೇತನ್ ವಿರುದ್ಧ ಕಪ್ಪುಪಟ್ಟಿ ಪ್ರದರ್ಶನ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಚೇತನ್ ಗೆ ಠಾಣೆ ಪ್ರವೇಶಕ್ಕೆ ನಿರ್ಬಂಧ:
ಈ ನಡುವೆ ಚೇತನ್ ನನ್ನು ಪೋಲಿಸರು ಠಾಣೆಯೊಳಗೆ ಬಿಡಲಿಲ್ಲ. ಪೊಲೀಸರ ಈ ಕ್ರಮವನ್ನು ಪ್ರತಿಭಟಿಸಿ ಚೇತನ್ ರಸ್ತೆ ತಡೆಗೆ ಮುಂದಾದರು. ಕೆಲವು ಕನ್ನಡ ಪರ ಸಂಘಟನೆಗಳು ಚೇತನ್ ಗೆ ಸಾಥ್ ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ