ಪೇಜಾವರ ಶ್ರೀಗಳ ಕುರಿತಂತೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ನೀಡಿದ್ದ ಹೇಳಿಕೆ ಸಂಬಂಧ ಇಂದು ವಿಚಾರಣೆಗಾಗಿ ಬೆಂಗಳೂರಿನ ಬಸವನಗುಡಿ ಪೋಲಿಸ್ ಠಾಣೆಗೆ ಆಗಮಿಸಿದರು.
ತಮ್ಮ ವಕೀಲರೊಂದಿಗೆ ಹಂಸಲೇಖ ಪೊಲೀಸ್ ಠಾಣೆಗೆ ಆಗಮಿಸಿದರು ಕೊತೆಯಲ್ಲಿ ನಟ ಚೇತನ್
ಆಗಮಿಸಿದ ಹಿನ್ನೆಲೆಯಲ್ಲಿ ಪರ ವಿರೋಧದ ಗುಂಪುಗಳ ನಡುವೆ ವಾಗ್ವಾದ ನಡೆಯುತ್ತಿದೆ. ಈ ನಡುವೆ ನಟ ಚೇತನ್ ಠಾಣೆ ಪ್ರವೇಶಕ್ಕೆ ಪೋಲಿಸರು ತಡೆ ನೀಡಿದರು .
ಹಿಂದೂ ಪರ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ. ಹಂಸಲೇಖ ಪರವಾಗಿಯೂ ಪ್ರಗತಿಪರರ ಗುಂಪು ಸೇರಿದೆ.
ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಬಳಿ ಬೀಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಜರಂಗದಳದ ಮುಖಂಡ ತೇಜಸ್, ಹಂಸಲೇಖ ಕ್ಷಮೆ ಕೇಳಿದರೇ ಆಗೋದಿಲ್ಲ. ಬೇಷರತ್ತು ಕ್ಷಮೆಯಾಚಿಸಬೇಕು.
ಈ ವಿಷಯದಲ್ಲಿ ನಟ ಚೇತನ್ ಬರುವ ಅವಶ್ಯಕತೆ ಇಲ್ಲ. ಚೇತನ್ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಚೇತನ್ ಈ ದೇಶದ ನಾಗರಿಕ ಅಲ್ಲ. ಸಸ್ಯಾಹಾರಿ ಹಾಗೂ ಮಾಂಸಹಾರಿಗಳನ್ನು ಒಡೆಯುವ ಕೆಲಸವನ್ನು ಚೇತನ್ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಪೋಲಿಸ್ ಠಾಣೆ ಒಳಗೆ ಚೇತನ್ ಅವರನ್ನು ಬಿಡಬಾರದು. ಚೇತನ್ ವಿರುದ್ಧ ಕಪ್ಪುಪಟ್ಟಿ ಪ್ರದರ್ಶನ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಚೇತನ್ ಗೆ ಠಾಣೆ ಪ್ರವೇಶಕ್ಕೆ ನಿರ್ಬಂಧ:
ಈ ನಡುವೆ ಚೇತನ್ ನನ್ನು ಪೋಲಿಸರು ಠಾಣೆಯೊಳಗೆ ಬಿಡಲಿಲ್ಲ. ಪೊಲೀಸರ ಈ ಕ್ರಮವನ್ನು ಪ್ರತಿಭಟಿಸಿ ಚೇತನ್ ರಸ್ತೆ ತಡೆಗೆ ಮುಂದಾದರು. ಕೆಲವು ಕನ್ನಡ ಪರ ಸಂಘಟನೆಗಳು ಚೇತನ್ ಗೆ ಸಾಥ್ ನೀಡಿದರು.
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
This website uses cookies.
Leave a Comment