ಸರ್ಕಾರಿ ಅಧಿಕಾರಿಯ ವಿರುದ್ಧದ ಆರೋಪ – ಪ್ರತ್ಯಾರೋಪಗಳಿಗೆ ಮಾಧ್ಯಮ ಬಳಕೆ ಮಾಡಬೇಡಿ. ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆಯಿದೆ ಎಂದು ಮಹಿಳಾ ಅಧಿಕಾರಿಗಳಿಗಿಬ್ಬರಿಗೂ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ.
ಸಿಬ್ಬಂದಿ ಮತ್ತು ಆಡಳಿತ ಇಲಾಖೆಯಿಂದ ನೋಟಿಸ್ ಜಾರಿ ಮಾಡಿದೆ. ಸಿಎಂ ಸೂಚನೆ ಬಳಿಕ ಮಹಿಳಾ ಅಧಿಕಾರಿಗಳಿಗೆ ನೊಟೀಸ್ ಜಾರಿಯಾಗಿದ್ದು ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಈ ಆದೇಶ ಹೊರಡಿಸಿದ್ದಾರೆ.
ರೋಹಿಣಿ ಸಿಂಧೂರಿ – ಡಿ. ರೂಪಾ ಬೀದಿ ರಂಪಾಟ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ರಾಜ್ಯ ಸರ್ಕಾರ ಇಬ್ಬರಿಗೂ ನೋಟಿಸ್ ಜಾರಿ ಮಾಡಿದೆ.
ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆ ಇದೆ. ಆದರೆ ಅದನ್ನು ಬಿಟ್ಟು ನೀವು ಮಾಧ್ಯಮ ಮುಂದೆ ಹೋಗಿದ್ದೀರಿ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಆಗಿದೆ.
ಇದು ಅಖಿಲ ಭಾರತೀಯ ಸೇವಾ ನಿಯಮಗಳ ಉಲ್ಲಂಘನೆ ಎಂದು ತಿಳಿಸಿದೆ. ನಿಮ್ಮ ಆರೋಪಗಳನ್ನು ಸಕ್ಷಮ ಪ್ರಾಧಿಕಾರದ ಮುಂದೆ ಮಾಡಬಹುದು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು