ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ನಡೆದ ಈ ಘಟನೆಯಲ್ಲಿ ಜಿಲ್ಲಾ ಪಂಚಾಯತ್ ನೌಕರ ಶಿವೇಗೌಡರಿಗೆ ಹಾಸನದ ಉವಿಭಾಗಧಿಕಾರಿ ಜಗದೀಶ್ ಕಪಾಳಮೋಕ್ಷ ಮಾಡಿದ್ದಾರೆ.
ನೂರಾರು ಜನರು ಒಳ ಬರುತ್ತಿದ್ದಾಗ ಅವರ ಜೊತೆಯಲ್ಲಿಯೇ ಜಿಲ್ಲಾ ಪಂಚಾಯಿತಿ ನೌಕರ ಶಿವೇಗೌಡರು ಬಂದಿದ್ದರು. ಆ ವೇಳೆ ಎಸಿ ಜಗದೀಶ್ ಆತನನ್ನು ತಡೆದು, ಯಾಕೋ ಓಡಿ ಬರುತ್ತಿದ್ದಿಯಾ, ನಿನಗೆ ಯಾರು ಒಳಬಿಟ್ಟಿದ್ದು ಎಂದು ಏಕವಚನದಲ್ಲಿ ನಿಂದನೆ ಮಾಡಿ ಕಪಾಳ ಮೋಕ್ಷ ಮಾಡಿದ್ದಾರೆ.ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದ ಮಹಿಳೆ ಮೇಲೆ ಹರಿದ ಬಸ್ – ಚಿಕಿತ್ಸೆ ಫಲಿಸದೇ ಸಾವು : ಚಾಲಕನ ಬಂಧನ
ತಾನು ಜಿ.ಪಂ. ನೌಕರ ಎಂದು ಶಿವೇಗೌಡ ಗುರುತಿನ ಚೀಟಿ ತೋರಿಸಿದ್ದಾರೆ. ಆದರೆ ಎಸಿ ಜಗದೀಶ್ ಕೊರಳಲ್ಲಿ ಧರಿಸಿದ್ದ ಕಾರ್ಡ್ ಕಿತ್ತು ಎಸೆದಿದ್ದು, ಶಿವೇಗೌಡ ಕುಟುಂಬದವರ ಮುಂದೆಯೇ ಕಪಾಳಮೋಕ್ಷ ಮಾಡಿದ್ದಾರೆ.
ಸಣ್ಣ ಕಾರಣಕ್ಕೆ ನೂರಾರು ಭಕ್ತರು, ಪೊಲೀಸರು, ಅಧಿಕಾರಿಗಳ ಸಮ್ಮುಖದಲ್ಲೇ ಕಪಾಳಮೋಕ್ಷ ಮಾಡಿದ ಎಸಿ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ ಅಧಿಕಾರಿಯ ದರ್ಪವನ್ನು ಜನರು ಖಂಡಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು