ಭೀಕರ ರಸ್ತೆ ಅಪಘಾತದಲ್ಲಿ ಬೈಕ್, ಟ್ರ್ಯಾಕ್ಟರ್ ಗೆ ಡಿಕ್ಕಿಯಾಗಿ, ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣ ತಾಲೂಕು ಕಾರೆಹಳ್ಳಿ ಬಳಿ ನಡೆದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಾರೆಹಳ್ಳಿ ಬಳಿಯಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದಂತ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಲೋಕೇಶ್ ಆಚಾರಿ ಹಾಗೂ ಅವರ ಪತ್ನಿ ಲಕ್ಷ್ಮೀ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
ರಸ್ತೆ ಬದಿಯಲ್ಲಿ ಟ್ರ್ಯಾಕ್ಟರ್ ನಿಂತಿರುವುದನ್ನು ಗಮನಿಸದಂತ ಲೋಕೇಶ್ ಆಚಾರಿ, ಹಿಂದಿನಿಂದ ಡಿಕ್ಕಿ ಹೊಡೆದಿದ್ದಾರೆ.
ಈ ಪರಿಣಾಮವಾಗಿ ಬೈಕ್ ನಲ್ಲಿ ತೆರಳುತ್ತಿದ್ದಂತ ಒಂದೇ ಕುಟುಂಬದ ಲೋಕೇಶ್ ಮತ್ತು ಲಕ್ಷ್ಮೀ ದಂಪತಿ ಹಾಗೂ ಅವರ ಇಬ್ಬರು ಮಕ್ಕಳು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಆಗಮಿಸಿದ್ದು, ಪರಿಶೀಲನ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.