ಹಾಸನ ತಾಂತ್ರಿಕ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, ವಿದ್ಯಾರ್ಥಿಗಳ ಗಲಾಟೆಗೆ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ. ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿ ಲಾಠಿ ಬೀಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ತಾಂತ್ರಿಕ ಎಂಜಿನಿಯರಿಂಗ್ ವಿದ್ಯಾರ್ಥಿ ಪ್ರತಿನಿಧಿಯ ಚುನಾವಣೆ ನಡೆದಿತ್ತು. ನಿನ್ನೆ ಸಂಜೆ ಚುನಾವಣಾ ಫಲಿತಾಂಶ ಬಂದಿದ್ದು, ಗೆದ್ದವರು ಹಾಗೂ ಸೋತವರ ಬೆಂಗಲಿಗ ಗುಂಪುಗಳ ನಡುವೆ ಗಲಾಟೆ ನಡೆದಿದೆ.ಚಿಕ್ಕಮಗಳೂರಿನ ಬಳಿ ಒಂದೇ ನೇಣಿಗೆ ಕೊರಳೊಡ್ಡಿದ ಯುವ ಪ್ರೇಮಿಗಳು
ವರದಿಗಳ ಪ್ರಕಾರ ಚುನಾವಣೆಯಲ್ಲಿ ಗೆದ್ದಿದ್ದ ಗುಂಪಿನ ವಿದ್ಯಾರ್ಥಿಗಳು ಪೊಲೀಸರ ಅನುಮತಿ ಪಡೆದು ನಗರದಲ್ಲಿ ಮೆರವಣಿಗೆ ಮಾಡಿದ್ದರು. ಈ ವೇಳೆ ಸೋತವರ ಮೇಲೆ ಯುವಕರು ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ.
ವಿದ್ಯಾರ್ಥಿಗಳ ಗಲಾಟೆಯಿಂದ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಲಾಠಿ ಬೀಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಘಟನೆ ಹಾಸನ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚುನಾವಣೆ ಹೆಸರಿನಲ್ಲಿ ವಿದ್ಯಾರ್ಥಿಗಳು ಪುಂಡಾಟ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು