ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು : ಹೈ ತೀರ್ಪು – ದೊಡ್ಡಗೌಡರ ಕುಟುಂಬಕ್ಕೆ ಬಿಗ್ ಶಾಕ್

Team Newsnap
1 Min Read

ಬೆಂಗಳೂರು :

ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶಿಸಿದೆ.ಈ ತೀರ್ಪು ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೆ ಹೈಕೋರ್ಟ್​ ಶಾಕ್​ ನೀಡಿದೆ.

ಆರೋಪ ಏನಿತ್ತು..?

ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಿದ್ದರು. ಈ ವೇಳೆ ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಕೆ ಮಾಡಿರುವ ಆರೋಪ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿ ಬಂದಿತ್ತು.

ಆದಾಯ ತೆರಿಗೆ ವಿವರಗಳ ಸಂಬಂಧ ನಕಲಿ ದಾಖಲೆ ಸಲ್ಲಿಸಿರೋ ಗಂಭೀರ ಆರೋಪ ಮಾಡಿದ್ದರು.
ಇನ್ನು, ಪ್ರಜ್ವಲ್‌ ಆಯ್ಕೆಯನ್ನು ಅಸಿಂಧು ಮಾಡಿ ಎಂದು ಹೈಕೋರ್ಟ್​​ನಲ್ಲಿ ಎ. ಮಂಜು ಮತ್ತು ದೇವರಾಜೇಗೌಡ ಎಂಬುವರು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಮುಂದಿನ 6 ವರ್ಷ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡದಂತೆ ಆದೇಶ ಹೊರಡಿಸಿದೆ.

Share This Article
Leave a comment