ಭಾರಿ ವಿವಾದ, ಕುತೂಹಲ ಮೂಡಿಸಿರುವ ಹಾಸನ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲು ಬೆಂಗಳೂರಿನ ಜೆಪಿ ಭವನದಲ್ಲಿ ಇಂದು ಕರೆಯಲಾಗಿದ್ದ ಹಾಸನ ಜೆಡಿಎಸ್ ಮುಖಂಡರ ಸಭೆಯನ್ನು ವರಿಷ್ಠ ದೇವೇಗೌಡರು ಕೊನೆಯ ಕ್ಷಣದಲ್ಲಿ ರದ್ದು ಮಾಡಿದ್ದಾರೆ.
ಜೆಡಿಎಸ್ ನ ಹಾಸನ ಟಿಕೆಟ್ ಗಾಗಿ ದೇವೇಗೌಡರ ಕುಟುಂಬದಲ್ಲೇ ಭಾರಿ ಪೈಪೋಟಿ ನಡೆದಿದೆ. ಭವಾನಿ ರೇವಣ್ಣ ಟಿಕೆಟ್ ಗಾಗಿ ಕಸರತ್ತು ನಡೆಸಿದರೆ , ಮಾಜಿ ಸಿಎಂ ಕುಮಾರಸ್ವಾಮಿ ಭವಾನಿಗೆ ಟಿಕೆಟ್ ನೀಡಲು ಸಾಧ್ಯವಿಲ್ಲ. ಸಾಮಾನ್ಯ ಕಾರ್ಯಕರ್ತನಿಗೆ ಕೊಡುವುದಾಗಿ ಹೇಳಿಕೆ ನೀಡಿರುವುದು ಭವಾನಿ ಕನಸಿಗೆ ತಣ್ಣೀರು ಎರಚಿದ್ದಾರೆ.
ಈ ನಡುವೆ ಎಚ್ ಡಿ ರೇವಣ್ಣ , ಸ್ವರೂಪ್ ರೇವಣ್ಣ ಕೂಡ ಟಿಕೆಟ್ ಗಾಗಿ ಭಾರಿ ಲಾಭಿ ನಡೆಸಿರುವುದು ಗೌಡರ ಕುಟುಂಬಕ್ಕೆ ಬಿಸಿ ತುಪ್ಪವಾಗಿದೆ.
ನಿನ್ನೆ ದಿನ ರೇವಣ್ಣ ದೇವೇಗೌಡರನ್ನು ಭೇಟಿ ಮಾಡಿ ಹಾಸನದ ಬೆಳವಣಿಗೆ ಹಾಗೂ ವಿದ್ಯಮಾನಗಳನ್ನು ಚರ್ಚೆ ಮಾಡಿದ ನಂತರ ದೇವೇಗೌಡರು ಸಭೆ ರದ್ದು ಮಾಡಿದ್ದಾರೆ.
ನಾನೇ ಹಾಸನಕ್ಕೆ ಬಂದು ಮುಖಂಡರ ಸಭೆ ನಡೆಸುತ್ತೇನೆ. ಆತುರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ದೇವೇಗೌಡರು ರೇವಣ್ಣನಿಗೆ ಹೇಳಿದ್ದಾರೆ.
ಚಿಕ್ಕಮಂಗಳೂರಿನ ಪ್ರವಾಸದಲ್ಲಿ ಇರುವ ಮಾಜಿ ಸಿಎಂ ಕುಮಾರಸ್ವಾಮಿ ಸಭೆ ರದ್ದಾಗಿರುವ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾರೆ.
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
This website uses cookies.
Leave a Comment