ಹತ್ರಾಸ್ನಲ್ಲಿ ಅತ್ಯಾಚಾರ ದಿಂದ ಮೃತಪಟ್ಟ ಯುವತಿಯ ಕುಟುಂಬಸ್ಥರನ್ನು ಸಂತೈಸಲು ಹೊರಟಿದ್ದ ಪ್ರಿಯಾಂಕಾ ಗಾಂಧಿಯವರಿಗೆ ಅವಕಾಶ ನೀಡದೇ ಅವರ ಬಟ್ಟೆ ಹಿಡಿದಿದ್ದ ಪೋಲೀಸ್ ಮೇಲೆ ಬಿಜೆಪಿ ನಾಯಕಿ ಚಿತ್ರ ವಾಘ್ ಗರಂ ಆಗಿದ್ದಾರೆ.
ಪೋಲೀಸ್ ವರ್ತನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಹಾರಾಷ್ಟ್ರದ ಬಿಜೆಪಿ ಉಪಾಧ್ಯಕ್ಷೆ ಚಿತ್ರಾ ವಾಘ್, ಘಟನೆಯ ಬಗ್ಗೆ ಟ್ವಿಟರ್ನಲ್ಲಿ ‘ರಾಜಕೀಯ ನಾಯಕಿಯ ಮೇಲೆ ಪುರುಷ ಪೋಲೀಸ್ ಸಿಬ್ಬಂದಿಯೊಬ್ಬ ಕೈ ಕಾಲು ಎಷ್ಟು ಧೈರ್ಯ! ಪೋಲೀಸರು ತಮ್ಮ ಮಿತಿಯನ್ನು ಅರಿತಿರಬೇಕು. ಭಾರತೀಯ ಸಂಸ್ಕೃತಿಯನ್ನು ಆರಾಧಿಸುವ ಸಿಎಂ ಆದಿತ್ಯನಾಥ್ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು‘ ಎಂದು ಬರೆದುಕೊಂಡಿದ್ದಾರೆ.
ಸಾಮೂಹಿಕ ಅತ್ಯಾಚಾರದಿಂದ ಮೃತಪಟ್ಟ ಯುವತಿಯ ಕುಟುಂಬವನ್ನು ಸಂತೈಸಲು ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅನೇಕ ಕಾಂಗ್ರೆಸ್ ಕಾರ್ಯಕರ್ತರೊಡನೆ ಹಥ್ರಾಸ್ಗೆ ಹೊರಟಿದ್ದಾಗ ಡಿಎನ್ಡಿ ಪ್ಲಾಜಾದ ಬಳಿ ಪೋಲೀಸರು ಇವರ ಕಾರುಗಳನ್ನು ಅಡ್ಡಗಟ್ಟಿದ್ದರು. ನಂತರ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಇವರನ್ನು ಬಂಧಿಸಿದ್ದರು. ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸುವಾಗ ಪೋಲೀಸ್ ಸಿಬ್ಬಂದಿಯೊಬ್ಬ ಅವರ ಬಟ್ಟೆ ಹಿಡಿದಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಗಮನಿಸಿರುವ ಚಿತ್ರಾ ಅವರು ಪೋಲೀಸ್ ಸಿಬ್ಬಂದಿಯ ಮೇಲೆ ಆಕ್ರೋಶಗೊಂಡಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment