Trending

ಹತ್ರಾಸ್ ಪ್ರಕರಣ- ಕೋಮುದ್ವೇಷ ಹರಡಲು ಯತ್ನಿಸಿದ್ದ ನಾಲ್ವರ ಬಂಧನ

ಹತ್ರಾಸ್‌ನಲ್ಲಾದ ಅತ್ಯಾಚಾರದ ಪ್ರಕರಣವನ್ನು ಕೋಮುದ್ವೇಷಕ್ಕಾಗಿ ಬಳಸಿಕೊಳ್ಳಲು ಪ್ರಯತ್ನಿಸಿದ ಪಿಎಫ್‌ಐನ ನಾಲ್ವರು ಸದಸ್ಯರನ್ನು ಉತ್ತರ ಪ್ರದೇಶದ ಪೋಲೀಸರು ಬಂಧಿಸಿದ್ದಾರೆ.

ಮುಜಫರ್‌ನಗರದ ಸಿದ್ದಿಕಿ, ಮಲಪ್ಪುರಂನ ಸಿದ್ದಿಕ್, ಬಹ್ರೈಚ್ ಜಿಲ್ಲೆಯ ಮಸೂದ್ ಅಹ್ಮದ್ ಮತ್ತು ರಾಂಪುರ ಜಿಲ್ಲೆಯ ಆಲಂ ಬಂಧಿತ ಆರೋಪಿಗಳು.

ನಿನ್ನೆ ದೆಹಲಿಯಿಂದ ಉತ್ತರ ಪ್ರದೇಶಕ್ಕೆ ತೆರಳುತ್ತಿರುವಾಗ ಆರೋಪಿಗಳ ವಾಹನವನ್ನು ಅಡ್ಡಗಟ್ಟಿದ ಪೋಲೀಸರು ಇವರ ವಿಚಾರಣೆ ನಡೆಸಿದಾಗ ಇವರು ಪಾಪುಲರ್ ಫ್ರಂಟ್ ಆಫ್ ಇಂಡಿಯಾದ ಸದಸ್ಯರು‌ ಎಂದು ತಿಳಿದು ಬಂದಿದೆ. ಇವರು ಹತ್ರಾಸ್‌ನ ಅತ್ಯಾಚಾರದ ಪ್ರಕರಣವನ್ನಿಟ್ಟುಕೊಂಡು ಕೋಮುದ್ವೇಷದ ಮೂಲಕ ಉತ್ತರ ಪ್ರದೇಶದ ಶಾಂತಿಯನ್ನು ಕದಡಲು ಯೋಜನೆ ರೂಪಿಸಿದ್ದರು ಎಂದು ಆರೋಪಿಸಿ ಪೋಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಘಟನೆಯ ಬಗ್ಗೆ ಮಾತನಾಡಿದ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಪ್ರಶಾಂತ್ ಕುಮಾರ್ ಅವರು ‘ದೆಹಲಿಯಿಂದ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದ ಶಂಕಿತ ವ್ಯಕ್ತಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಆದ್ದರಿಂದ ಅವರ ವಾಹನಗಳನ್ನು ತಡೆದು ವಿಚಾರಣೆ ನಡೆಸಿದ್ದರು. ಈ ವೇಳೆಯಲ್ಲಿ ಅವರು‌ ಪಾಪುಲರ್ ಫ್ರಂಟ್ ಆಫ್ ಇಂಡಿಯಾದ ಸದಸ್ಯರು ಎಂದು ತಿಳಿದು ಬಂದಿದೆ. ಕ್ಯಾಂಪಸ್ ಆಫ್ ಫ್ರಂಟ್ ಜೊತೆಯೂ ಅವರ ನಂಟಿರುವುದು ತಿಳಿದು ಬಂದಿದೆ’ ಎಂದು ಹೇಳಿದರು.

ಪೋಲೀಸರು ಆರೋಪಿಗಳ ಬಳಿಯಿದ್ದ ಲ್ಯಾಪ್‌ಟಾಪ್, ಮೊಬೈಲ್, ಕೋಮುದ್ವೇಷ ಹೊತ್ತಿಸುವ ಹಾಗೂ ಶಾಂತಿ ಕದಡಬಲ್ಲಂತಹ ಸಾಹಿತ್ಯವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ಮೇಲೆ ಪೋಲೀಸರು ಭಾರತೀಯ ದಂಡ ಸಂಹಿತೆ, 124 ಎ (ದೇಶ-ದೇಶದ್ರೋಹದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಪ್ರಯತ್ನ) 120-ಬಿ (ಪಿತೂರಿ), 153-ಎ (ಧರ್ಮದ ಆಧಾರದ ಮೇಲೆ ದ್ವೇಷವನ್ನು ಹರಡುವುದು) ಸೆಕ್ಷನ್ 109 (ಅಪರಾಧದ ಪ್ರಚೋದನೆ) ಭಾಷೆ ಮತ್ತು ಜಾತಿ, 153-ಬಿ (ಹೇಳಿಕೆಗಳು ರಾಷ್ಟ್ರೀಯ ಸಮಗ್ರತೆಗೆ ಪ್ರತಿಕೂಲ ಪರಿಣಾಮ ಬೀರುತ್ತವೆ), 195 (ಸಾಕ್ಷ್ಯಗಳ ರಚನೆ), 465 (ನಕಲಿ), 468 (ದುರುದ್ದೇಶಪೂರಿತ ದಾಖಲೆಗಳ ಬಳಕೆ), 501 (ಮಾನಹಾನಿಕರ ಮುದ್ರಣ ಸೇರಿದಂತೆ ಒಟ್ಟು 20 ವಿಭಾಗಗಳು), 505 (ಭಯದ ವಾತಾವರಣವನ್ನುಂಟುಮಾಡುವ ಹೇಳಿಕೆ) ಮತ್ತು ಮಾಹಿತಿ ತಂತ್ರಜ್ಞಾನ ತಿದ್ದುಪಡಿ ಕಾಯ್ದೆ 2008 ರ ಸೆಕ್ಷನ್ 67ರ ಪ್ರಕಾರ ಆರೋಪಿಗಳ ಮೇಲೆ ಪ್ರಕರಣ ಹೇರಿ‌ ಎಫ್‌ಐಆರ್ ದಾಖಲಿಸಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024