Main News

ಮಂಡ್ಯದಲ್ಲಿ ಮಳೆ – ವರುಣನ ಆರ್ಭಟಕ್ಕೆ ಬೆಂಗಳೂರು ಜನ ತತ್ತರ : ರಸ್ತೆಗಳು ಜಲವೃತ

ಕಳೆದ ಕೆಲ ದಿನಗಳಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆ ಶನಿವಾರ ರಾಜ್ಯದಲ್ಲಿ ಮತ್ತೆ ಜೋರಾಗಿದೆ,ಮಂಡ್ಯ ಸೇರಿದಂತೆ ಕೆಲವೆಡೆ ಮಳೆ ಸುರಿದಿದೆ, ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಭಾರಿ ಮಳೆ .

ಧಾರಾಕಾರ ಮಳೆಯಿಂದ ಬೆಂಗಳೂರಿನ ರಸ್ತೆಗಳೆಲ್ಲಾ ಜಲಾವೃತವಾಗಿ ವಾಹನ ಸವಾರರು ಹಾಗೂ ತಗ್ಗು ಪ್ರದೇಶ ಜನರು ಪರದಾಡುವಂತಾಗಿತ್ತು.

ಬೆಂಗಳೂರಿನ ಜೆ.ಸಿ.ನಗರ, ಮೇಖ್ರಿ ಸರ್ಕಲ್, ಜಯನಗರ, ವಿಜಯ ನಗರ, ರಾಜಾಜಿನಗರ, ಹೆಬ್ಬಾಳ,ಕೆಂಗೇರಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ.

ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದವು. ಶಾಂತಿನಗರ ಡಬಲ್ ರೋಡ್​ನಲ್ಲಿ ಹೊಳೆಯಂತೆ ರಸ್ತೆಯಲ್ಲಿ ಮಳೆ ನೀರು ಹರಿದಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್​ನ 14ನೇ ಕ್ರಾಸ್​ನ ಮನೆಗಳಿಗೆ ಮಳೆ ನೀರು ನುಗ್ಗಿದ ಅವಾಂತರವೇ ಸೃಷ್ಟಿಯಾಗಿತ್ತು. ಮನೆಗಳಲ್ಲಿ ಮೊಣಕಾಲುದ್ದ ನೀರು ನಿಂತುಕೊಂಡಿದ್ದರಿಂದ ನಿವಾಸಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಮನೆಗಳಿಗೆ ನುಗ್ಗಿದ ನೀರನ್ನು ನಿವಾಸಿಗಳು ರಾತ್ರಿ ಇಡೀ ಹೊರಹಾಕಲು ಹರಸಾಹಸವೇ ಪಟ್ಟಿದ್ದಾರೆ. ಸ್ಥಳೀಯ ನಿವಾಸಿಗಳು ಸರ್ಕಾರ ಮತ್ತು ಬಿಬಿಎಂಪಿಗೆ ಹಿಡಿಶಾಪ ಹಾಕಿದರು

ಮಂಡ್ಯದಲ್ಲೂ ಕೂಡ ರಾತ್ರಿ 8 ಗಂಟೆಗೆ ಗುಡುಗು ಸಹಿತ ಮಳೆ ಆರಂಭವಾಗಿ ರಾತ್ರಿ 11.30 ರ ತನಕ ಎಡಬಿಡದೇ ಸುರಿಯಿತು.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024