Trending

ಎಲ್ಲರೂ ಸೇರಿ ಮಗನನ್ನು ಮುಗಿಸಿದರು: ಸೋಲನ್ನು ಮರೆಯದ ಎಚ್ ಡಿ ಕೆ

ಎಲ್ಲರೂ ಸೇರಿ ಮುಗಿಸಬೇಕು ಅಂತಾ ಮುಗಿಸಿದರು. ಆದ್ರೆ ನನಗೆ ಮಂಡ್ಯ ಜಿಲ್ಲೆಯ ಜನರ ಬಗ್ಗೆ ಬೇಸರವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ರಾಜಕಾರಣಕ್ಕೆ ಬಂದ ದಿನದಿಂದ ಮಂಡ್ಯ ಜನರ ಜೊತೆ ನನ್ನ ಒಡನಾಟವಿದೆ. ಜಿಲ್ಲೆಯ ಜನರು ತುಂಬಾ ಮುಗ್ಧರು, ಎಲ್ಲರನ್ನು ನಂಬುತ್ತಾರೆ. ದೇವೇಗೌಡರು ಮತ್ತು ನಮ್ಮನ್ನು ಬೆಳೆಸಿದ್ದೇ ಮಂಡ್ಯದ ಜನತೆ. ಕೆಲವರು ನಾವು ಬೇರೆ ಜಿಲ್ಲೆಯವರೆಂದು ಹೇಳ್ತಾರೆ. ಆ ಮಾತುಗಳನ್ನೆಲ್ಲಾ ನಂಬಬೇಡಿ ಎಂದು ಹೇಳುವ ಮೂಲಕ ಪುತ್ರ ನಿಖಿಲ್ ಸೋಲಿನ ಬಗ್ಗೆ
ಇಂದಿಗೂ ಬೇಸರದಿಂದ ಹೇಳಿದರು.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬ್ಯಾಡರಹಳ್ಳಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಮಗನ ಸೋಲಿನ ಬಗ್ಗೆ ಬೇಸರದ ಮಾತುಗಳನ್ನು ಹೇಳಿ ಹಲವರ ಒತ್ತಾಯದ ಮೇರೆಗೆ ಮಗನನ್ನು ಚುನಾವಣೆಗೆ ನಿಲ್ಲಿಸಿದೆ. ಕಾರ್ಯಕರ್ತರು ತುಂಬಾ ಕೆಲಸ ಮಾಡಿದರು. ಈ ಹಿಂದೆ ಗೆದ್ದಾಗ ಐದು ಕಾಲು ಲಕ್ಷ ಮತ ನೀಡಿದ್ದ ಜನರು ಸೋತಾಗ ಐದು ಮುಕ್ಕಾಲು ಲಕ್ಷ ಮತ ನೀಡಿದರು.

ನಾನು ನಿವೃತ್ತಿ ಆಗೋಲ್ಲಾ :

ನಾನು ರಾಜಕೀಯದಿಂದ ನಿವೃತ್ತಿಯಾಗಬೇಕು ಎಂದು ಕೊಂಡಿದ್ದೆ. ಜನರು ತೋರಿಸುವ ಪ್ರೀತಿ ನೋಡಿದಾಗ ನಾನು ಅನ್ಯಾಯ ಮಾಡುತ್ತಿದ್ದೇನೆ ಅನ್ನಿಸಿತು. ನನಗೆ ಈ ವ್ಯವಸ್ಥೆಯಿಂದ ಆದ ಬೇಸರದಿಂದ ಹೊರಗೆ ಹೋದರೆ ಜನರಿಗೆ ಅನ್ಯಾಯ ಮಾಡಿದ ಹಾಗೆ ಆಗುತ್ತೆ. ಈ ಕಾರಣಕ್ಕೆ ನಾನು ರಾಜಕೀಯದಲ್ಲಿ ಮುಂದುವರಿದಿದ್ದೇನೆ. ವೈಯುಕ್ತಿಕವಾಗಿ ರಾಜಕೀಯದಲ್ಲಿ ಮುಂದುವರಿಯುವ ಆಸೆ ಇಲ್ಲ ಎಂದು ಹೇಳಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024