ಮುಂದಿನ ವಿಧಾನ ಸಭಾ ಚುನಾವಣೆಯ ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದಿಂದ ನಾನೇ ಸ್ಪರ್ಧೆ ಗೆ ಇಳಿಯುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮೈಸೂರಿನಲ್ಲಿ ಬಾಂಬ್ ಸಿಡಿಸಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕತ೯ರ ಜೊತೆ ಮಾತನಾಡುವ ವೇಳೆ ಈ ವಿಷಯವನ್ನು ಹೊರ ಹಾಕಿದ ಕುಮಾರಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡರು.
ಚಾಮುಂಡೇಶ್ವರಿ ಕ್ಷೇತ್ರದಿಂದ ಹಾಲಿ ಶಾಸಕ ಜಿ ಟಿ ದೇವೇಗೌಡರು ಜೆಡಿಎಸ್ ಗೆ ಗುಡ್ ಬೈ ಹೇಳುವ ನಿರ್ಧಾರ ಬೆನ್ನಲ್ಲಿ ಕುಮಾರಸ್ವಾಮಿ ತಾವು ಸ್ಪರ್ಧೆ ಮಾಡುವ ಪ್ಲಾನ್ ನ್ನು ಪ್ರಕಟಿಸಿದ್ದಾರೆ.
ಕುಮಾರಸ್ವಾಮಿಯವರ ಈ ನಿರ್ಧಾರದಿಂದ ಮೈಸೂರು ರಾಜಕಾರಣದಲ್ಲಿ ಸಂಚಲನ ಮೂಡಿದೆ.