ರಾಜ್ಯ ರಾಜಕೀಯದಲ್ಲಿ ಯಾವ ಬೆಳವಣಿಗೆ ಬೇಕಾದರೂ ನಡೆಯಬಹುದು. ಬಿಜೆಪಿ ನಾಯಕ, ಮಾಜಿ ಸಚಿವ ಎ.ಮಂಜು, ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಆಗಿ, ಪುನಃ ಕಾಂಗ್ರೆಸ್ ಮರಳುವ ಇಂಗಿತ ವ್ಯಕ್ತಪಡಿಸಿದ್ದಾರೆ
ಈ ಹಿಂದೆ ಕಾಂಗ್ರೆಸ್ನಲ್ಲಿಯೇ ಇದ್ದ ಎ.ಮಂಜು 2019 ಮಾರ್ಚ್ನಲ್ಲಿ ಬಿಜೆಪಿ ಸೇರಿದ್ದರು. ಇದೀಗ ಮತ್ತೆ ಬಿಜೆಪಿಯಿಂದ ಕಾಂಗ್ರೆಸ್ ಸೇರುತ್ತಾರೆ ಅನ್ನೋ ವದಂತಿ
ಹರಡಿದೆ
ಕಳೆದ ರಾತ್ರಿ ಸಿದ್ದರಾಮಯ್ಯರ ಸರ್ಕಾರಿ ನಿವಾಸದಲ್ಲಿ ಎ.ಮಂಜು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕೆಲವು ವರದಿಗಳ ಪ್ರಕಾರ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
2023ರ ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಸಿಟ್ಟುಕೊಂಡು ಎಂ.ಮಂಜು ಅವರನ್ನು ಅತೀ ಶೀಘ್ರದಲ್ಲೇ ಕಾಂಗ್ರೆಸ್ಗೆ ಸೇರ್ಪಡೆ ಮಾಡಿಕೊಳ್ಳುವ ಕೆಲಸಕ್ಕೆ ಕಾಂಗ್ರೆಸ್ ಕೂಡ ಮುಂದಾಗಿದೆ ಎನ್ನಲಾಗಿದೆ.