ಮಾಧ್ಯಮ ಆರೋಗ್ಯ ಕಾರ್ಡ್ ಗೆ ಚಾಲನೆ

Team Newsnap
1 Min Read

ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಒದಗಿಸುವ ಸಂಬಂಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಣಿಪಾಲ್ ಆಸ್ಪತ್ರೆಯು ‘ಮಾಧ್ಯಮ ಆರೋಗ್ಯ ಕಾರ್ಡ್’ ‍ಪ್ರಾರಂಭಿಸಿದೆ.

ಆಸ್ಪತ್ರೆಗಳ ಅಧ್ಯಕ್ಷ ಡಾ. ಸುದರ್ಶನ್ ಬಲ್ಲಾಳ್ ಅವರು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಮಾಧ್ಯಮ ಆರೋಗ್ಯ ಕಾರ್ಡ್‌ ಹಸ್ತಾಂತರಿಸುವ ಮೂಲಕ ಈ ಯೋಜನೆಗೆ ಚಾಲನೆ ನೀಡಿದರು. ಈ ಕಾರ್ಡ್ ಹೊಂದಿರುವವರಿಗೆ ಹೊರರೋಗಿ ವಿಭಾಗದ ಸಲಹೆ, ಪ್ರಯೋಗಾಲಯಗಳಲ್ಲಿ ಪರೀಕ್ಷೆ, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ವೆಚ್ಚದಲ್ಲಿ ಶೇ 20 ರಷ್ಟು ರಿಯಾಯಿತಿ ದೊರೆಯಲಿದೆ. ಹಳೆ ವಿಮಾನ ನಿಲ್ದಾಣ ರಸ್ತೆ, ವೈಟ್‌ ಫೀಲ್ಡ್‌ ಹಾಗೂ ಜಯನಗರದ ಘಟಕದಲ್ಲಿ ಕಾರ್ಡ್‌ನ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.

Share This Article
Leave a comment