ಕೆಲ ದಿನಗಳಿಂದ ಸ್ವಲ್ಪ ಬಿಡುವು ನೀಡಿದ್ದ ವರುಣ ಮತ್ತೆ ನಿನ್ನೆ ರಾತ್ರಿ ತನ್ನ ಆರ್ಭಟವನ್ನು ರಾಜಧಾನಿ ಬೆಂಗಳೂರಿನಲ್ಲಿ ಮುಂದುವರಿಸಿ ಭಾರಿ ಅವಾಂತರಗಳನ್ನು ಸೃಷ್ಠಿಸಿದ್ದಾನೆ.
ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಸಾರ್ವಜನಿಕ ಆಸ್ತಿಪಾಸ್ತಿಗಳು ಹಾನಿಯಾಗಿವೆ.
ಬೆಂಗಳೂರಿನ ವಿವಿಧೆಡೆ 8 ಮರಗಳು ಧರೆಗುರುಳಿವೆ. ಕೆ.ಜಿ.ರಸ್ತೆಯಲ್ಲಿ ಬಿದ್ದಿದ್ದ ಬೃಹತ್ ಮರದಿಂದ ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿತ್ತು. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಪ್ರಶಾಂತ್ ನಗರ, ಶೋಭಾ ಆಸ್ಪತ್ರೆ ಬಳಿ, ಶ್ರೀರಾಂಪುರ, ಕೆ.ಜಿ.ರಸ್ತೆ ಗಾಂಧಿನಗರ, ಲಿಂಕ್ ರೋಡ್ ಮಲ್ಲೇಶ್ವರ, ಸುಬ್ರಮಣ್ಯನಗರ ಹಾಗೂ ರಾಜಾಜೀನಗರದಲ್ಲಿ ತಲಾ ಒಂದೊಂದು ಮರಗಳು ನೆಲಕಚ್ಚಿದ್ದವು. ಹಲವೆಡೆ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥಗೊಂಡಿತ್ತು.
ಉತ್ತರಹಳ್ಳಿ, ಕೆ.ಪಿ.ಅಗ್ರಹಾರ ಫಿಶ್ ಮಾರ್ಕೆಟ್ ಬಳಿ ಮನೆಗೆ ನೀರು ನುಗ್ಗಿದ್ದ ದೃಶ್ಯಗಳು ಕಂಡುಬಂದವು.
ಸಂಗೋಳ್ಳಿ ರಾಯಣ್ಣ ರೈಲ್ವೆ ಅಂಡರ್ ಪಾಸ್ ಸಂಪೂರ್ಣ ಜಲಾವೃತವಾಗಿತ್ತು. ಪೈಪ್ಲೈನ್ ರಸ್ತೆ ಮಲ್ಲೇಶ್ವರಂ ಬಳಿ ಮನೆಗೆ ನುಗ್ಗಿದ ನೀರು ಸಂಪೂರ್ಣ ತೆರವುಗೊಳಿಸುವಲ್ಲಿ ತಡರಾತ್ರಿ ಕಳೆದಿತ್ತು.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment