ಮಂಡ್ಯ ಮೈಸೂರು ಮತ್ತು ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಭಾರಿ ಮಳೆ ಸುರಿದಿದೆ,
ಮಂಡ್ಯದಲ್ಲಿ ಎರಡು ದಿನಗಳಿಂದ ಸಂಜೆ ವೇಳೆ ಮಳೆ ಸುರಿದು ತಂಪನೆರೆದಿದೆ.
ಬೆಂಗಳೂರಿನ ಹಲವೆಡೆ ಮಳೆ ಸುರಿದು ಬಿಸಿಲ ಬೇಗೆಗೆ ಮಳೆರಾಯ ತಂಪೆರೆದಿದ್ದಾನೆ.
ಬೆಂಗಳೂರಿನ ಟೌನ್ ಹಾಲ್, ಮೆಜೆಸ್ಟಿಕ್, ಮಾರ್ಕೆಟ್, ಚಾಮರಾಜಪೇಟೆ, ಬಸವನಗುಡಿ, ವಿಧಾನಸೌಧ, ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಬುಧವಾರವೂ ಸಂಜೆ ವೇಳೆ ಮಳೆರಾಯನ ಅಬ್ಬರ ಜೋರಾಗಿತ್ತು.
ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳೆಲ್ಲಾ ಕೆರೆಯಂತಾಗಿದೆ. ಮಳೆಯ ಅಬ್ಬರಕ್ಕೆ ಎಂಜಿ ರಸ್ತೆ ಹಾಗೂ ಅನೀಲ್ ಕುಂಬ್ಳೆ ರಸ್ತೆಗಳಲ್ಲಿ ಮೊಣಕಾಲುದ್ದಕ್ಕೂ ನೀರು ನಿಂತಿದೆ. ದಿಢೀರನೆ ಸುರಿದ ಮಳೆಗೆ ವಾಹನ ಸವಾರರು ಹೈರಾಣಾಗಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ