ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆ ಮುಂದುವರೆದಿದೆ ಮಳೆ ಹಿನ್ನೆಲೆಯಲ್ಲಿ ನಾಳೆ ಶುಕ್ರವಾರ ಕೊಡಗು ಜಿಲ್ಲೆಯ ಅಂಗನವಾಡಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಭಾಗಮಂಡಲದಲ್ಲಿ ಕಾವೇರಿ ನದಿ ನೀರಿನ ಮಟ್ಟ ಹೆಚ್ಚುತಲೇ ಇದೆ. ತ್ರಿವೇಣಿ ಸಂಗಮ ಜಲಾವೃತವಾಗಿದೆ ಭಾಗಮಂಡಲ ಮತ್ತು ಮಡಿಕೇರಿ ಹಾಗೂ ಭಾಗಮಂಡಲ- ವಿರಾಜಪೇಟೆ ನಡುವಿನ ಸಂಪರ್ಕ ಕಡಿತಗೊಂಡಿದೆ.
ಜಿಲ್ಲೆಯ ಅಲ್ಲಲ್ಲಿ ಗಾಳಿಯಿಂದಾಗಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಕ್ಷಿಪ್ರಕಾಯ೯ಪಡೆ ಸಿಬ್ಬಂದಿಗಳು ಇವುಗಳನ್ನು ತೆರವುಗೊಳಿಸಿ ರಸ್ತೆ ಸಂಚಾರ ಸುಗಮಗೊಳಿಸುತ್ತಿದ್ದಾರೆ.
2859 ಅಡಿ ಗರಿಷ್ಟ ಸಂಗ್ರಹ ಸಾಮಥ್ಯ೯ದ ಹಾರಂಗಿ ಜಲಾಶಯದಲ್ಲಿ ಇಂದು 2827 ಅಡಿ ನೀರಿನ ಸಂಗ್ರಹವಿದೆ. 1557 ಕ್ಯೂಸೆಕ್ ನೀರಿನ ಒಳಹರಿವಿದೆ.
ಕಾವೇರಿ ನದಿ ಪಾತ್ರದಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ವಿರಾಜಪೇಟೆ ತಹಶಿಲ್ದಾರ್ ರಾಮಚಂದ್ರ, ನೋಡಲ್ ಅಧಿಕಾರಿ ರಾಹುಲ್ ಇತರರು ಇಂದು ಬೇತ್ರಿ ಬಳಿ ಹರಿಯುತ್ತಿರುವ ನೀರಿನ ಹರಿವು ಹೆಚ್ಚಳ ವೀಕ್ಷಿಸಿದರು.ಮೈಶುಗರ್ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಕಾರ್ಯ ಆರಂಭ
NH:275 ಸಂಪಾಜೆ ಯಿಂದ ಮಾದೇನಾಡು, – ರಾಷ್ಟ್ರೀಯ ಹೆದ್ದಾರಿ ಮದೆನಾಡು ಬಳಿ ರಸ್ತೆಯ ಗುಂಡಿ ಬಿದ್ದಿರುವುದನ್ನು ಸರಿಪಡಿಸುವುದು, ಹೆದ್ದಾರಿ ಬದಿ ನೀರು ಸರಾಗವಾಗಿ ಚರಂಡಿಯಲ್ಲಿ ಹರಿಯುವಂತೆ ಮಾಡುವುದು ಹೀಗೆ ಹಲವು ನಿರ್ವಹಣಾ ಕಾರ್ಯವನ್ನು ಹೆದ್ದಾರಿ ಎಂಜಿನಿಯರಿಂಗ್ ವಿಭಾಗ ವತಿಯಿಂದ ಕೈಗೊಳ್ಳಲಾಗಿದೆ ಎಂದು ಹೆದ್ದಾರಿ ವಿಭಾಗದ ಎಇಇ ನಾಗರಾಜು ಅವರು ತಿಳಿಸಿದ್ದಾರೆ.
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
This website uses cookies.
Leave a Comment