ಬೆಂಗಳೂರಿನಲ್ಲಿ ಭಾರಿ ಮಳೆ : ಹಾನಿಗೊಳಗಾದ ಕುಟುಂಬಕ್ಕೆ 25 ಸಾವಿರ ರು. ಪರಿಹಾರ ಘೋಷಣೆ

Team Newsnap
1 Min Read

ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಹಾನಿಗೀಡಾದ ಪ್ರತಿ ಕುಟುಂಬಕ್ಕೆ ಸಿ ಎಂ ಬಿಎಸ್​ ಯಡಿಯೂರಪ್ಪ ತಲಾ 25 ಸಾವಿರ ರು ಪರಹಾರ ನೀಡುವುದಾಗಿ ಘೋಷಿಸಿದ್ದಾರೆ.

 ಸಿಎಂ ಯಡಿಯೂರಪ್ಪ ಬಿಬಿಎಂಪಿ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿ, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಬಗ್ಗೆ, ಸಂತ್ರಸ್ತರಿಗೆ ನೆರವು ಒದಗಿಸುವ ಕುರಿತಂತೆ ಸಮಾಲೋಚನೆ ಮಾಡಿದರು.

ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡವರಿಗೆ, ಮನೆ ಕಳೆದುಕೊಂಡವರಿಗೆ ಪರಿಹಾರ ಹಾಗೂ ಆಹಾರ ಪದಾರ್ಥಗಳ ವಿತರಣೆ ಬಗ್ಗೆ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಈ ಸಭೆಯಲ್ಲಿ  ಕಂದಾಯ ಸಚಿವ ಆರ್ ಅಶೋಕ್, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್, ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಭಾಗಿಯಾಗಿದ್ದರು. ಮಳೆಯಿಂದ ಹಾನಿಗೊಳಗಾದವರಿಗೆ ಸ್ಥಳದಲ್ಲೇ 25 ಸಾವಿರ ರೂ.ಚೆಕ್ ವಿತರಣೆ ಮಾಡಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ಮತ್ತು ನಾಳೆ ಸಹ ಬಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ಕಟ್ಟೆಚ್ಚರವಾಗಿ ಇರುವಂತೆ ಸಿಎಂ ಬಿಎಸ್​ವೈ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಲ್ಲಿ  ಮಳೆಯಿಂದ ಅವಾಂತರ ಹಿನ್ನೆಲೆಯಲ್ಲಿ, ಮಳೆಪೀಡಿತ ಪ್ರದೇಶಗಳಿಗೆ ಸಿಎಂ ಬಿಎಸ್​ವೈ ಭೇಟಿ ನೀಡಲು ಮುಂದಾಗಿದ್ದಾರೆ. ಸದ್ಯದ ಪರಿಸ್ಥಿತಿ ಅವಲೋಕಿಸಲು ಸಿಟಿ ರೌಂಟ್ ನಡೆಸಲು ನಿರ್ಧಾರ ಮಾಡಿದ್ದಾರೆ. ಬೆಂಗಳೂರಿನಲ್ಲಿ ಆಗಿರುವ ಮಳೆ ಹಾನಿ ಬಗ್ಗೆ ಸಿಎಂ ಬಿಎಸ್​​ವೈ ಸಚಿವರಿಂದ ಮಾಹಿತಿ ಪಡೆದಿದ್ದಾರೆ.

ಎಲ್ಲೆಲ್ಲಿ ಮಳೆ ಸುರಿದಿದೆ, ಅಲ್ಲಿ ಮಳೆಯಿಂದ ಯಾವ ರೀತಿ ಅವಾಂತರ ಸೃಷ್ಟಿ ಯಾಗಿದೆ, ಮಳೆಯಿಂದ ಹಾನಿಯಾಗಿರುವ ಪ್ರಮಾಣ, ನಿರಾಶ್ರಿತರ ಪರಿಸ್ಥಿತಿ, ನಿರಾಶ್ರಿತರಿಗೆ ಒದಗಿಸುವ ಸೌಲಭ್ಯ ಹಾಗೂ ಮುಂದೆ ಏನು ಕ್ರಮ ಮಾಡಬೇಕು ಎಂಬುದರ ಬಗ್ಗೆ ಸಿಎಂ ಅಧಿಕಾರಿಗಳು ಮತ್ತು ಸಚಿವರ ಜೊತೆ ಸಿಎಂ ಚರ್ಚೆ ನಡೆಸಿದ್ದಾರೆ.

https://kannada.thenewsnap.com/heavy-rain-in-bengaluru-break-for-festival-happiness/
TAGGED:
Share This Article
Leave a comment