ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಮಳೆಯ ಅಬ್ಬರಕ್ಕೆ ಸಾಕಷ್ಟು ಅವಾಂತರಗಳು ಸೃಷ್ಠಿಯಾಗಿದೆ. ನಗರದ 8 ವಲಯದ 51 ವಾರ್ಡ್ಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಮೆಜೆಸ್ಟಿಕ್ನಲ್ಲಿ ತಡೆಗೋಡೆ ಕುಸಿದು 7 ಕಾರುಗಳು ಜಖಂಗೊಂಡಿದೆ. ಶಿವಾನಂದ ಅಂಡರ್ ಪಾಸ್ನಲ್ಲಿ ಡಾಂಬಾರ್ ಕಿತ್ತು ಹೋಗಿದೆ. ಹಲವೆಡೆ ಮನೆಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿದೆ.
ಶಿವಾಜಿನಗರದಲ್ಲಿ ಮಳೆಗೆ ಕೊಚ್ಚಿ ಹೋಗ್ತಿದ್ದ ಬೈಕ್ ರಕ್ಷಿಸಲು ಸವಾರರು ಹರಸಾಹಸ ಪಟ್ಟಿದ್ದಾರೆ. ವಿಧಾನಸೌಧ ರಸ್ತೆಯಲ್ಲಿ ಮಂಡಿಯುದ್ಧ ನಿಂತ ನೀರು ನಿಂತಿತ್ತು. ಶಾಂತಿನಗರದ ಮುಖ್ಯರಸ್ತೆಯ ನಡು ನೀರಿನಲ್ಲಿ ಬಿಎಂಡಬ್ಲ್ಯೂ ಕಾರುಗಳು ಕೆಟ್ಟು ನಿಂತಿತ್ತು. ಶಿಕ್ಷಕರ ಅಕ್ರಮ ನೇಮಕಾತಿ : ರಾಜ್ಯದ 51 ಕಡೆ ಸಿಐಡಿ ದಾಳಿ- 38 ಮಂದಿ ಶಿಕ್ಷಕರ ಬಂಧನ
ಬಾಪೂಜಿ ಲೇಔಟ್ನ ಮೂರನೇ ಮುಖ್ಯ ರಸ್ತೆಯ ಮೇಲೆ ಮರ ಬಿದ್ದಿದೆ. ವಿದ್ಯುತ್ ಲೈನ್ ಮತ್ತು ಕೇಬಲ್ಗಳ ಮೇಲೆ ಮರ ಬಿದ್ದ ಕಾರಣ ಈ ಭಾಗದಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ. ಸಿಲ್ಕ್ ಬೋರ್ಡ್ನಲ್ಲಿ ಭಾರೀ ಮಳೆಗೆ ರಸ್ತೆಯಲ್ಲೇ ನೀರು ನಿಂತಿದ್ದರಿಂದ ಕಿಲೋಮೀಟರ್ಗಟ್ಟಲೇ ಟ್ರಾಫಿಕ್ ಜಾಮ್ ಸೃಷ್ಟಿಯಾಗಿತ್ತು.
ಅತಿಹೆಚ್ಚು ಮಳೆ ಎಲ್ಲೆಲ್ಲಿ ?
ವಿದ್ಯಾಪೀಠ – 61.5 ಮಿ.ಮೀ
ಬಸವನಗುಡಿ – 61.5ಮಿ.ಮೀ
ಹಗಡೂರು – 48 ಮಿ.ಮೀ
ಚೌಡೇಶ್ವರಿ ವಾರ್ಡ್ ಯಲಹಂಕ – 47.5 ಮಿ.ಮೀ
ಬಿಳೆಕಲ್ಲಹಳ್ಳಿ – 42 ಮಿ.ಮೀ
ಹೊರಮಾವು – 42 ಮಿ.ಮೀ
ನಾಯಂಡನಹಳ್ಳಿ – 41 ಮಿ.ಮೀ
ಜ್ಞಾನಭಾರತಿ- 41 ಮಿ.ಮೀ
ಸಾರಕ್ಕಿ – 40 ಮಿ.ಮೀ
ಕೋಣನಕುಂಟೆ – 38 ಮಿ.ಮೀ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment