ಮೈಸೂರಿನ ಹೊರವಲಯದಲ್ಲಿರುವ ಬೋಗಾದಿ ಕೆರೆ ತುಂಬಿ ಹರಿಯುತ್ತಿದೆ. ಇದರಿಂದ ರಿಂಗ್ ರಸ್ತೆಯಿಂದ ಅಮೃತಾನಂದಮಯಿ ವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯದ ಸೇತುವೆಯೇ ನೀರಿನಲ್ಲಿ ಕೊಚ್ಚಿಹೋಗಿದೆ. ಇಡೀ ರಸ್ತೆ ಕುಸಿತವಾಗಿದೆ.

ಧಾರಾಕಾರ ಮಳೆಯಿಂದ ಬೋಗಾದಿಯ ನಾಗಲಿಂಗೇಶ್ವರ ದೇವಸ್ಥಾನದ ಬಳಿಯ ರಸ್ತೆ ಕೊಚ್ಚಿ ಹೋಗಿದೆ. ಬೋಗಾದಿ ಗ್ರಾಮಕ್ಕೆ ತೆರಳುವ ಸಂಪರ್ಕ ಕಡಿತಗೊಂಡಿದೆ. ಶಾಲಾ-ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಇದನ್ನು ಓದಿ : 2024ರ ಲೋಕಸಭಾ ಚುನಾವಣೆಗೆ 8 ಮಂದಿ ಹಾಲಿ MPಗಳಿಗೆ ಬಿಜೆಪಿ ಟಿಕೆಟ್ ಇಲ್ಲ ? ಯುವಕರಿಗೆ ಆದ್ಯತೆ
ನಗರದಲ್ಲಿ ಬಿಟ್ಟೂ ಬಿಡದೇ ಸುರಿದ ಮಳೆಯಿಂದಾಗಿ ಬೋಗಾದಿ ಕೆರೆ ತುಂಬಿ ಹರಿಯುತ್ತಿದ್ದು, ವಿವಿಧ ಬಡಾವಣೆಗಳಿಗೆ ನೀರು ನುಗ್ಗಿದೆ. ಇಲ್ಲಿನ ಆನಂದ ನಗರವೂ ಅಕ್ಷರಶಃ ಜಲದಿಗ್ಬಂಧನಕ್ಕೆ ಒಳಗಾಗಿದೆ. ಬಹುತೇಕ ನಿವಾಸಿಗಳು ನಿನ್ನೆಯಿಂದ ಮನೆಯೊಳಗೇ ಇದ್ದಾರೆ. ಮಳೆ ನೀರು ಮನೆಯ ಗೇಟ್ವರೆಗೂ ತುಂಬಿದ್ದು, ಇಂದೂ ಸಹ ಮಳೆಯಾದರೆ, ನೀರು ಮನೆಗಳಿಗೆ ನುಗ್ಗುವುದು ನಿಶ್ಚಿತವಾಗಿದೆ.
60 ಅಡಿ ಅಗಲವಿದ್ದ ಆನಂದ ನಗರ ರಾಜಕಾಲುವೆಯನ್ನು ಒತ್ತುವರಿ ಮಾಡಿದ ಪರಿಣಾಮ 15 ಅಡಿಗೆ ತಲುಪಿದ್ದು, ನೀರು ರಸ್ತೆ ಮೇಲೆ ಹರಿಯುತ್ತಿದೆ. ಕೊಳಚೆ ನೀರಿನಲ್ಲಿ ಜನರು ಸಂಕಷ್ಟ ಅನುಭವಿಸುತ್ತಿದ್ದು ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
- ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು
- ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
- ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ
- ಅಗ್ನಿಪಥ್ ನೇಮಕಾತಿ ಅಗ್ನಿವೀರರ ನೌಕಾಪಡೆಯಲ್ಲಿ ಶೇ.20ರಷ್ಟು ಹುದ್ದೆ ಮಹಿಳೆಯರಿಗೆ ಮೀಸಲು
- 40 ಸೆಕೆಂಡಿನಲ್ಲಿ 60ಕ್ಕೂ ಹೆಚ್ಚು ಬಾರಿ ಚುಚ್ಚಿ ಆಸ್ತಿಗಾಗಿ ಗುರೂಜಿ ಕೊಲೆ: ವನಜಾಕ್ಷಿ ಬಂಧನ
More Stories
ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು
ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ