ಮೈಸೂರಿನ ಹೊರವಲಯದಲ್ಲಿರುವ ಬೋಗಾದಿ ಕೆರೆ ತುಂಬಿ ಹರಿಯುತ್ತಿದೆ. ಇದರಿಂದ ರಿಂಗ್ ರಸ್ತೆಯಿಂದ ಅಮೃತಾನಂದಮಯಿ ವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯದ ಸೇತುವೆಯೇ ನೀರಿನಲ್ಲಿ ಕೊಚ್ಚಿಹೋಗಿದೆ. ಇಡೀ ರಸ್ತೆ ಕುಸಿತವಾಗಿದೆ.
ಧಾರಾಕಾರ ಮಳೆಯಿಂದ ಬೋಗಾದಿಯ ನಾಗಲಿಂಗೇಶ್ವರ ದೇವಸ್ಥಾನದ ಬಳಿಯ ರಸ್ತೆ ಕೊಚ್ಚಿ ಹೋಗಿದೆ. ಬೋಗಾದಿ ಗ್ರಾಮಕ್ಕೆ ತೆರಳುವ ಸಂಪರ್ಕ ಕಡಿತಗೊಂಡಿದೆ. ಶಾಲಾ-ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ನಗರದಲ್ಲಿ ಬಿಟ್ಟೂ ಬಿಡದೇ ಸುರಿದ ಮಳೆಯಿಂದಾಗಿ ಬೋಗಾದಿ ಕೆರೆ ತುಂಬಿ ಹರಿಯುತ್ತಿದ್ದು, ವಿವಿಧ ಬಡಾವಣೆಗಳಿಗೆ ನೀರು ನುಗ್ಗಿದೆ. ಇಲ್ಲಿನ ಆನಂದ ನಗರವೂ ಅಕ್ಷರಶಃ ಜಲದಿಗ್ಬಂಧನಕ್ಕೆ ಒಳಗಾಗಿದೆ. ಬಹುತೇಕ ನಿವಾಸಿಗಳು ನಿನ್ನೆಯಿಂದ ಮನೆಯೊಳಗೇ ಇದ್ದಾರೆ. ಮಳೆ ನೀರು ಮನೆಯ ಗೇಟ್ವರೆಗೂ ತುಂಬಿದ್ದು, ಇಂದೂ ಸಹ ಮಳೆಯಾದರೆ, ನೀರು ಮನೆಗಳಿಗೆ ನುಗ್ಗುವುದು ನಿಶ್ಚಿತವಾಗಿದೆ.
60 ಅಡಿ ಅಗಲವಿದ್ದ ಆನಂದ ನಗರ ರಾಜಕಾಲುವೆಯನ್ನು ಒತ್ತುವರಿ ಮಾಡಿದ ಪರಿಣಾಮ 15 ಅಡಿಗೆ ತಲುಪಿದ್ದು, ನೀರು ರಸ್ತೆ ಮೇಲೆ ಹರಿಯುತ್ತಿದೆ. ಕೊಳಚೆ ನೀರಿನಲ್ಲಿ ಜನರು ಸಂಕಷ್ಟ ಅನುಭವಿಸುತ್ತಿದ್ದು ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment