ಹಾಸನ ಜಿಲ್ಲೆ ಬಾಗೂರು ನವಿಲೆ ಸುರಂಗದ ಬಳಿ ಬೈಕ್ ಮತ್ತು ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಯುವ ಪ್ರೇಮಿಗಳ ಮೃತದೇಹ ಹೇಮಾವತಿ ನಾಲೆಯಲ್ಲಿ ಪತ್ತೆಯಾಗಿದೆ.
ನವೆಂಬರ್ 16 ರಂದು ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ ಬಳಿ ಬೈಕ್ ನಿಲ್ಲಿಸಿ ಜೋಡಿ ನಾಪತ್ತೆಯಾಗಿತ್ತು. ಇದೀಗ ಇಬ್ಬರ ಮೃತದೇಹ ತುಮಕೂರು ಜಿಲ್ಲೆ ನೊಣವಿನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.
ಹೇಮಾವತಿ ನಾಲೆಯಲ್ಲಿ ಪತ್ತೆಯಾಗಿದ್ದು, ಒಬ್ಬರನ್ನೊಬ್ಬರು ಬಟ್ಟೆಯಿಂದ ಕಟ್ಟಿಕೊಂಡು ನಾಲೆಗೆ ಜಿಗಿದಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದ ಸುಶ್ಮಿತ(18), ಹಾಗು ಮತಿಘಟ್ಟ ಗ್ರಾಮದ ರಮೇಶ್(19) ಮೃತರು. ಐಟಿಐ ಓದುತ್ತಿದ್ದ ರಮೇಶ್ ಹಾಗೂ ಪದವಿ ಓದುತ್ತಿದ್ದ ಸುಶ್ಮಿತಾ ನಡುವೆ ಪ್ರೇಮಾಂಕುರವಾಗಿತ್ತು. ಇವರಿಬ್ಬರು ಒಂದು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರೂ ಸಹ ಬೇರೆ ಬೇರೆ ಜಾತಿಯಾಗಿದ್ದರಿಂದ ಮನೆಯಲ್ಲಿ ಮದುವೆಗೆ ವಿರೋಧ ಇತ್ತು. ಮನೆಯವರ ವಿರೋಧಕ್ಕೆ ಹೆದರಿ ಯುವಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.
18 ವರ್ಷದ ಸುಶ್ಮಿತ, 19 ವರ್ಷದ ರಮೇಶ್ ಮೃತ ದುರ್ದೈವಿಗಳು. ಹಿರೀಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ತುಮಕೂರು ಜಿಲ್ಲೆಯ ವ್ಯಾಪ್ತಿಯಲ್ಲಿ ನಾಲೆಯಲ್ಲಿ ಮೃತದೇಹ ಪತ್ತೆಯಾಗಿದೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಮನೆಯವರ ವಿರೋಧಕ್ಕೆ ಹೆದರಿ ಆತ್ಮಹತ್ಯೆಗೆ ಶಾರಣಾಗಿರಬಹುದು ಎನ್ನಲಾಗುತ್ತಿದೆ.
ಅಷ್ಟೇ ಅಲ್ಲದೇ ಪ್ರೇಮಿಗಳು ತಾವೇ ಆತ್ಮಹತ್ಯೆಗೆ ಶರಣಾಗಿದ್ದಾರೋ ಅಥವಾ ಯಾರಾದರೂ ಕೊಲೆ ಮಾಡಿ ನಾಲೆಗೆ ಎಸೆದಿದ್ದಾರೋ ಎಂಬ ಅನುಮಾನವೂ ವ್ಯಕ್ತವಾಗುತ್ತಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು