Main News ಆಗಸ್ಟ್ 23 ರಿಂದ ರಾಜ್ಯದಲ್ಲಿ ಶಾಲೆ ಆರಂಭ – ಮಾರ್ಗದರ್ಶಿ ಸೂತ್ರಗಳು ಇಲ್ಲಿವೆ
ಆಗಸ್ಟ್ 23 ರಿಂದ ರಾಜ್ಯದಾದ್ಯಂತ ಶಾಲೆಗಳು ಆರಂಭಕ್ಕೂ ಮುನ್ನ
ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಆಗಸ್ಟ್ 23 ರಿಂದ ರಾಜ್ಯಾದ್ಯಂತ 9 ಮತ್ತು 10ನೇ ತರಗತಿ ಮಕ್ಕಳಿಗೆ ಶಾಲೆ ಆರಂಭವಾಗಲಿದೆ.
- ನಿತ್ಯ ಅರ್ಧ ದಿನ ಮಾತ್ರ ತರಗತಿ ಇರುತ್ತದೆ.
- ಸೋಮವಾರ ದಿಂದ ಶುಕ್ರವಾರ 10 ರಿಂದ 1.30 ತರಗತಿ ಮಾಡಬೇಕು
- ಶನಿವಾರ 10 ರಿಂದ 12.50 ವರೆಗೆ ಕ್ಲಾಸ್ ಮಾಡಬೇಕು,
- ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿ ಶಾಲೆಗಳಲ್ಲಿ ಮಾಡಬೇಕು.
- ಮಕ್ಕಳು ಮನೆಯಿಂದ ನೀರು, ಉಪಹಾರ ತರಲು ಅವಕಾಶ
- ಶಾಲೆಗಳಲ್ಲಿ ಕುಡಿಯುವ ಬಿಸಿ ನೀರು ವ್ಯವಸ್ಥೆ ಮಾಡಬೇಕು.
- ಹಾಜರಾತಿ ಕಡ್ಡಾಯ ಅಲ್ಲ, ಆನ್ಲೈನ್ ನಲ್ಲಿ ಬೇಕಾದರು ಕೂಡ ಹಾಜರಾತಿ ಆಗಬಹುದು.
- ಒಂದು ತಂಡದಲ್ಲಿ 15-20 ವಿದ್ಯಾರ್ಥಿಗಳು ಮಾತ್ರ ಇರಬೇಕು.
- ವಿದ್ಯಾರ್ಥಿಗಳು ಪೆನ್ನು, ಪುಸ್ತಕ, ರಬ್ಬರ್ ಸೇರಿದಂತೆ ಯಾವ ವಸ್ತುಗಳನ್ನು ಹಂಚಿಕೊಳ್ಳಬಾರದು.
- ನಿತ್ಯ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮಾಡಿ ತಾಪಮಾನ ಪರಿಶೀಲನೆ ಮಾಡಬೇಕು.
- ಡೆಸ್ಕ್ ನಲ್ಲಿ ಕೂರಿಸುವುದು, ವಿದ್ಯಾರ್ಥಿಯಗಳ ಆಗಮನ ಮತ್ತು ನಿರ್ಗಮದ ವೇಳೆ ಶಾಲಾ-ಕಾಲೇಜುಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯ ಕ್ರಮವಹಿಸಬೇಕು.
- ಶಾಲಾ-ಕಾಲೇಜು ಕೊಠಡಿಗಳು, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಮಾಡಬೇಕು.
- ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸ್ಯಾನಿಟೈಸ್ ವ್ಯವಸ್ಥೆ ಶಾಲಾ-ಕಾಲೇಜುಗಳಲ್ಲಿ ಮಾಡಬೇಕು.
- ಆರೋಗ್ಯ ವ್ಯತ್ಯಾಸ ಇರೋ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಶಾಲೆ ಪ್ರವೇಶ ಇಲ್ಲ.
- ಪ್ರಾರ್ಥನೆ ಸಮಯ, ಊಟದ ಸಮಯದಲ್ಲಿ ಅಗತ್ಯ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮವಹಿಸಬೇಕು.
- ಗುಂಪು ಕ್ರೀಡೆಗಳ ಆಯೋಜನೆ ಮಾಡುವಾಗ ಎಚ್ಚರವಹಿಸಬೇಕು. ಕಾಲೇಜುಗಳಲ್ಲಿ ಸ್ವಿಮ್ಮಿಂಗ್ ಪೂಲ್ ಇದ್ದರೆ ಕಡ್ಡಾಯವಾಗಿ ಅದನ್ನು ಕ್ಲೋಸ್ ಮಾಡಬೇಕು.
- ಶಾಲಾ-ಕಾಲೇಜು ಕ್ಯಾಂಪಸ್ ಗೆ ಸಾರ್ವಜನಿಕ ನಿಷೇಧ ಹೇರಬೇಕು. ವಿದ್ಯಾರ್ಥಿಗಳು ಲೈಬ್ರರಿಗಳಲ್ಲಿ ಕುಳಿತು ಓದಲು ನಿಷೇಧ.
- ಪುಸ್ತಕ ಪಡೆದು ಮನೆಯಲ್ಲಿ ಓದುವ ನಿಯಮ ಪಾಲನೆ ಮಾಡಬೇಕು.
- ಶಾಲಾ-ಕಾಲೇಜುಗಳ ಹಂತದ ಕ್ರೀಡಾ ಕೂಟಗಳ ಆಯೋಜನೆ ಮಾಡಬಾರದು.
Recent Posts
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment