Main News

ಚಿತ್ರದುರ್ಗದ ಮುರುಘಾ ಮಠಕ್ಕೆ ತಾತ್ಕಾಲಿಕ ಆಡಳಿತಾಧಿಕಾರಿ ನೇಮಿಸಿದ ಹೈಕೋರ್ಟ್

ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠಕ್ಕೆ ಚಿತ್ರದುರ್ಗದ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ.

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿದ್ದ ಕರ್ನಾಟಕ ಸರ್ಕಾರದ ಕ್ರಮವನ್ನು ರದ್ದು ಪಡಿಸಿದ್ದ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಎಚ್. ಏಕನಾಥ್ ಎಂಬುವರು ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಳೆ ಮತ್ತು ನ್ಯಾಯಮೂರ್ತಿ ಎಂ. ಜೆ. ಎಸ್. ಕಮಲ್ ಅವರಿದ್ದ ವಿಭಾಗೀಯ ಪೀಠ ತಾತ್ಕಾಲಿಕ ಆಡಳಿತಾಧಿಕಾರಿ ನೇಮಿಸಿ ಆದೇಶಿಸಿದೆ.

ಮಠದ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಲಯದ ನ್ಯಾಯಾಧೀಶರು ಮಂಗಳವಾರ ಬೆಳಗ್ಗೆ ಅಧಿಕಾರ ಸ್ವೀರಿಸಲು ನ್ಯಾಯಪೀಠ ಸೂಚನೆ ನೀಡಿದೆ. ತಾತ್ಕಾಲಿಕವಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿಗಳು (ಜಿಲ್ಲಾ ನ್ಯಾಯಾಧೀಶರು) ಮುರುಘಾ ಮಠ ಮತ್ತು ಮಠದ ಅಧೀನದ ಶಿಕ್ಷಣ ಸಂಸ್ಥೆಗಳ ದಿನ ನಿತ್ಯದ ವ್ಯವಹಾರಗಳನ್ನು ನೋಡಿಕೊಳ್ಳಬೇಕು. ಆದರೆ, ಯಾವುದೇ ನೀತಿ, ನಿರೂಪಣೆಗಳನ್ನು ಮಾಡಲು ಮುಂದಾಗಬಾರದು. ಇದಕ್ಕೆ ಜಿಲ್ಲಾಧಿಕಾರಿಗಳು ಅಗತ್ಯವಿರುವ ಸಹಕಾರವನ್ನು ನೀಡಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.

ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಿದೆ.

Team Newsnap
Leave a Comment
Share
Published by
Team Newsnap

Recent Posts

ಪಾದಚಾರಿಗಳ ಮೇಲೆ ಬೈಕ್ ಹರಿದು ನಾಲ್ವರು ಸಾವು

ವಿಜಯಪುರ: ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಬೈಕ್ ಹರಿದು ಜಾತ್ರೆಗೆಂದು ಬಂದ ಯುವಕರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ… Read More

September 6, 2024

ಇದು ಸಮರ್ಥನೆಯಲ್ಲ..! ನೇರ ನುಡಿ..!

ಶಿಕ್ಷಣ ಮತ್ತು ವ್ಯವಸ್ಥೆ "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ".. ಮೊದಲನೆಯಯದಾಗಿ ನನಗೆ ವಿದ್ಯೆ ಕಲಿಸಿ ಸಮಾಜದಲ್ಲಿ ಒಂದು ಉತ್ತಮವಾಗಿ… Read More

September 5, 2024

ಗುರು ಎಂಬೊ ಅರಿವಿನ ವಿಸ್ತಾರ….

'ಗುರುವಿನ ಗುಲಾಮನಾಗುವ ತನಕದೊರೆಯದಣ್ಣ ಮುಕುತಿ".ಎಂದು ಪುರಂದರದಾಸರು ಗುರುವಿನ ಮಹಿಮೆಯನ್ನು ಬಹು ಹಿಂದೆಯೇ ಹೇಳಿದ್ದಾರೆ,  ಪ್ರಾಚೀನ ಕಾಲದಲ್ಲಿ ಗುರು ತನ್ನ ಶಿಷ್ಯನಿಗೆ  ತನ್ನ… Read More

September 5, 2024

ನಿಸ್ವಾರ್ಥ ಜೀವಿ ಜ್ಞಾನದ ಭುವಿ

"ಗುರುವಿನ ಗುಲಾಮನಾಗುವ ತನಕ ದೊರೆಯದೆನ್ನ ಮುಕುತಿ"ಎಂಬಂತೆ ವಿದ್ಯಾರ್ಥಿಗಳು ಗುರುವಿನ ಗುಲಾಮನಾದಾಗಲೇ ಅಪ್ರತಿಮ ಬದುಕು ರೂಪಿಸಿಕೊಳ್ಳುವನು ಎಂಬುದು ಅಕ್ಷರಶಃ ಸತ್ಯ.ಅಕ್ಷರಗಳ ಕಲಿಸುತ… Read More

September 5, 2024

ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪು ಬರುವ ಮೊದಲು ರಾಜೀನಾಮೆ ನೀಡಲಿ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ… Read More

September 5, 2024

ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್ ಜೋಡಿ

ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್… Read More

September 5, 2024